Select Your Language

Notifications

webdunia
webdunia
webdunia
webdunia

ಬಂತೂ.. ಬಂತೂ.. ಅಂತೂ ಇಂತೂ ಕೇಂದ್ರದಿಂದ ಪರಿಹಾರ ಬಂತು!

ಬಂತೂ.. ಬಂತೂ.. ಅಂತೂ ಇಂತೂ ಕೇಂದ್ರದಿಂದ ಪರಿಹಾರ ಬಂತು!
ಬೆಂಗಳೂರು , ಮಂಗಳವಾರ, 7 ಜನವರಿ 2020 (16:08 IST)
ಬೆಂಗಳೂರು: ನೆರೆ ಪರಿಹಾರಕ್ಕೆ ಕೇಂದ್ರಕ್ಕೆ ಎಷ್ಟೇ ಮನವಿ ಸಲ್ಲಿಸಿದರೂ ಕಿವಿಗೊಡುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರ ಸಿಕ್ಕಿದೆ. ಕೇಂದ್ರ ನೆರೆ ಪರಿಹಾರಕ್ಕೆ ಹೆಚ್ಚುವರಿ ಹಣ ಬಿಡುಗಡೆ ಮಾಡಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

 

ಮೊನ್ನೆಯಷ್ಟೇ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದಾಗ ಸಿಎಂ ಬಹಿರಂಗವಾಗಿಯೇ ನೆರೆ ಪರಿಹಾರಕ್ಕೆ ಮನವಿ ಸಲ್ಲಿಸಿದ್ದರು. ಆದರೆ ಇದಕ್ಕೆ ಆಗ ಪ್ರಧಾನಿ ಮೌನವಾಗಿದ್ದಿದ್ದು ಟೀಕೆಗೆ ಗುರಿಯಾಗಿತ್ತು.

ಇದೀಗ ಕೇಂದ್ರದಿಂದ ಪರಿಹಾರ ಹಣ ಬಂದಿರುವುದಾಗಿ ಸಿಎಂ ಘೋಷಿಸಿದ್ದಾರೆ. ಆದರೆ ಎಷ್ಟು ಹಣ ಬಂದಿದೆ ಎಂಬುದನ್ನು ಸಿಎಂ ಬಹಿರಂಗಪಡಿಸಿಲ್ಲ. ಸದ್ಯದಲ್ಲೇ ಹೆಚ್ಚುವರಿ ಪರಿಹಾರ ಹಣವನ್ನು ಅರ್ಹರಿಗೆ ಹಂಚಿಕೆ ಮಾಡುವುದಾಗಿ ಸಿಎಂ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯೋಗ ಸಂಗಮ – 2020 ಎಲ್ಲಿ? ಎತ್ತ?