Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ : ಶ್ರೀರಾಮುಲು

Webdunia
ಶುಕ್ರವಾರ, 24 ಸೆಪ್ಟಂಬರ್ 2021 (13:51 IST)
ಬೆಂಗಳೂರು,ಸೆ.24 :  ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಕುರಿತು ಆರ್ಥಿಕ ಪರಿಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

ವಿಧಾನಪರಿಷತ್ನಲ್ಲಿಂದು ಜೆಡಿಎಸ್ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಂದು ಲಕ್ಷ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡಲಾಗಿದೆ. ಹಿಂದುಳಿದ ವರ್ಗಗಳ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡಬೇಕೆಂದು ಸದಸ್ಯರು ಬೇಡಿಕೆ ಮಂಡಿಸಿದ್ದಾರೆ. ಆದರೆ, ಆರ್ಥಿಕ ಪರಿಸ್ಥಿತಿ ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದರು.
ಸಚಿವರ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮರಿತಿಬ್ಬೇಗೌಡ ಅವರು, ಯಾರಿಗೋ ಲಾಭ ಮಾಡಿಕೊಡುವ ಸಲುವಾಗಿ ಸೇವಾ ಸಿಂಧು ಅಪ್ಲಿಕೇಷನ್ ಮಾಡಲಾಗಿದೆ. ಅದರಲ್ಲಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು 150 ರೂ. ಪಾವತಿಸಬೇಕು. ಕಚೇರಿಗೆ ಅಲೆಯಬೇಕು. ಪ್ರತಿ ವರ್ಷ ಪಾಸ್ ನವೀಕರಣಕ್ಕೆ ಹೊಸ ಪ್ರಕ್ರಿಯೆಗಳನ್ನೇ ಪಾಲನೆ ಮಾಡಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.ನಂತರ ಕಾಂಗ್ರೆಸ್ನ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಶ್ರೀರಾಮುಲು, ರಾಜ್ಯದ ಗಡಿ ಭಾಗಗಳಲ್ಲಿ 15 ಸಾರಿಗೆ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅವುಗಳಿಗೆ 37 ಹುದ್ದೆಗಳ ಪೈಕಿ 8 ಮಂದಿ ಮಾತ್ರ ಕೆಲಸ ಮಾಡುತ್ತಿದ್ದಾರೆ. 21 ಹುದ್ದೆಗಳು ಖಾಲಿ ಇವೆ.
ಸಾರಿಗೆ ಇಲಾಖೆಗೆ 2781 ಹುದ್ದೆಗಳು ಮಂಜೂರಾಗಿದ್ದು, 1252 ಮಂದಿ ಕೆಲಸ ಮಾಡುತ್ತಿದ್ದಾರೆ. 1529 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಈಗಾಗಲೇ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments