Webdunia - Bharat's app for daily news and videos

Install App

ಗಣಿಗಾರಿಕೆ ಮಾಡುತ್ತಿದ್ದ ಮಾಲೀಕ ಪೊಲೀಸರ ಕಂಡು ಪರಾರಿ!

Webdunia
ಮಂಗಳವಾರ, 18 ಡಿಸೆಂಬರ್ 2018 (14:35 IST)
ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಕಲ್ಲು ಕೋರೆ ಮೇಲೆ ಪೊಲೀಸರು ದಾಳಿನಡೆಸಿದ್ದಾರೆ.

ಪೊಲೀಸರು ದಾಳಿ ಮಾಡಿ 2 ಲಕ್ಷ 90 ಸಾವಿರ ರೂ. ಮೌಲ್ಯದ ಕಲ್ಲು ಗಣಿಗಾರಿಕೆಗೆ ಬಳಸುತ್ತಿದ್ದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹೆಚ್.ತಿಮ್ಮಾಪುರದಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಹೆಚ್.ತಿಮ್ಮಾಪುರ ಗ್ರಾಮದ ಸರ್ವೆ ನಂಬರ್ 26 ರಲ್ಲಿ ಭದ್ರಾವತಿ ಮೂಲದ ಅರುಣ್ ಕುಮಾರ್ ಎಂಬುವರು ಪರವಾನಗಿ ಪಡೆಯದೆ ಅಕ್ರಮವಾಗಿ ಗಲ್ಲು ಗಣಿಗಾರಿಕೆ ನಡೆಸುತ್ತಿದ್ದರು. ಅಲ್ಲದೇ ಸ್ಫೋಟಕ ವಸ್ತುಗಳನ್ನ ಬಳಸಿ ಕಲ್ಲು ಕೋರೆಯನ್ನು ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ತರೀಕೆರೆ ಇನ್ಸ್‌ಪೆಕ್ಟರ್ ಜಯಂತ್ ಎಲ್. ಗೌಳಿ, ಕಲ್ಲು ಕೋರೆ ಮೇಲೆ ದಾಳಿ ಮಾಡಿದ್ದಾರೆ.

ಈ ವೇಳೆ ಪೊಲೀಸರನ್ನು ಕಂಡ ಮಾಲೀಕ ಅರುಣ್ ಕುಮಾರ್ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳದಲ್ಲಿದ್ದ 2 ಲಕ್ಷ 90 ಸಾವಿರ ರೂ ಮೌಲ್ಯದ ಸ್ಫೋಟಕ ವಸ್ತುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments