Webdunia - Bharat's app for daily news and videos

Install App

ಮೆಟ್ರೋ ರೈಲಿನಲ್ಲಿ ದಂಡ ವಸೂಲಿ 1ಕೋಟಿ ದಾಟಿದೆ

Webdunia
ಶುಕ್ರವಾರ, 7 ಜನವರಿ 2022 (18:05 IST)
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಗುರುವಾರ ಬೆಳಗ್ಗೆವರೆಗೆ ತನ್ನ ಆವರಣದೊಳಗೆ ಮತ್ತು ರೈಲುಗಳಲ್ಲಿ ಸರಿಯಾಗಿ ಮಾಸ್ಕ್ ಧರಿಸದ ಪ್ರಯಾಣಿಕರಿಂದ ಒಟ್ಟು ಒಂದು ಕೋಟಿ ದಂಡವನ್ನು ವಸೂಲಿ ಮಾಡಿದೆ. ನಗರದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಹೊಸ ವರ್ಷದಿಂದ ಮೆಟ್ರೋಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ.
BMRCL ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಮಾರ್ಚ್ 24, 2021 ರಿಂದ ಜನವರಿ 6, 2022 ರ ಬೆಳಗ್ಗೆವರೆಗೂ ರೀಚ್-2 (ನಗರ ರೈಲು ನಿಲ್ದಾಣದಿಂದ ಮೈಸೂರು ರಸ್ತೆಗೆ ಪಶ್ಚಿಮ ಮಾರ್ಗ)ದಲ್ಲಿ 25,13,630 ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಮತ್ತು ರೀಚ್-1 ನಲ್ಲಿ (ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗಿನ ಪೂರ್ವ ಮಾರ್ಗ)ದಲ್ಲಿ 22,44,420 ರೂಪಾಯಿ ದಂಡ ವಸೂಲಿಯಾಗಿದೆ.
 
ಜನವರಿ 5 ರವರೆಗೆ ಮೆಟ್ರೋ ಹಾಗೂ ನಿಲ್ದಾಣದಲ್ಲಿ ಮಾಸ್ಕ್‌ ಧರಿಸದ ಒಟ್ಟು 10,113 ಪ್ರಕರಣಗಳು ದಾಖಲಾಗಿವೆ. ಜನವರಿ 1 ರಿಂದ ಜನವರಿ 5 ರವರೆಗೆ ರೈಲುಗಳಲ್ಲಿ ಮಾಸ್ಕ್ ಧರಿಸಿದ ಪ್ರಯಾಣಿಕರಿಂದ 2,49,950 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. 'ನಾವು ಗುರುವಾರ ರಾತ್ರಿ 11.30 ಕ್ಕೆ ಒಂದು ಕೋಟಿ ದಂಡದ ಅಂಕಿಅಂಶವನ್ನು ಮಾಡಿದ್ದೇವೆ. ಬುಧವಾರ (ಜನವರಿ 5) ರಾತ್ರಿಯವರೆಗೆ, BMRCL 99,90,320 ರೂಪಾಯಿ ದಂಡ ವಸೂಲಿಯಾಗಿತ್ತು' ಎಂದು ಮೆಟ್ರೋದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 
BMRCL ಕಾರ್ಯನಿರ್ವಾಹಕ ಎ ಎಸ್ ಶಂಕರ್, "ಇದನ್ನು ನಾವು ಯಾವುದೇ ಸಾಧನೆ ಎಂದು ನೋಡುವುದಿಲ್ಲ. ಇದನ್ನು ಸಾಮಾನ್ಯ ಜನರ ಒಳಿತಿಗಾಗಿ ಮಾಡಲಾಗುತ್ತದೆ. ನಮ್ಮ ಪ್ರಯಾಣಿಕರ ಮೇಲೆ ದಂಡ ವಿಧಿಸಲು ನಾವು ನಿಜವಾಗಿಯೂ ಆಸಕ್ತಿ ಹೊಂದಿಲ್ಲ. ಕರ್ನಾಟಕ ಸರ್ಕಾರ ಮತ್ತು BMRCL ನಿಗದಿಪಡಿಸಿದ ಮಾನದಂಡಗಳ ಪ್ರಕಾರ ನಾವು ಈ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ" ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments