10ಕ್ಕೂ ಅಧಿಕ ಜನರ ವಿರುದ್ಧ FIR

Webdunia
ಭಾನುವಾರ, 8 ಜನವರಿ 2023 (18:13 IST)
ಕಲಬುರಗಿ ನಗರದ ಚೆಕ್ ಪೋಸ್ಟ್ ಬಳಿ ಶನಿವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ FIR ದಾಖಲಾಗಿದೆ. ಬಸಯ್ಯಾ ಗುತ್ತೇದಾರ, ದಸ್ತಯ್ಯಾ ಗುತ್ತೇದಾರ, ರಾಜು, ಶಾಂತಿಬಾಯಿ ಸೇರಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ ನಗರದ ಸಬ್-ಅರ್ಬನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಭವಾನಿ ಮರಾಠ ಖಾನಾವಳಿ ಸ್ಥಳದ ವಿವಾದಕ್ಕೆ ಸಂಬಂಧಿಸಿದಂತೆ ಫೈರಿಂಗ್ ನಡೆದಿತ್ತು. ಕಾಂಗ್ರೆಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ್ ಪಾಟೀಲ್ ಸಹೋದರ ಚನ್ನವೀರ ಪಾಟೀಲ್ ಮೇಲೆ ಗುಂಡಿನ ದಾಳಿ ನಡೆದಿತ್ತು. ಘಟನೆಯಲ್ಲಿ ಚನ್ನವೀರ ಕೈಗೆ ಗುಂಡು ತಗುಲಿದ್ದು, ಅಬ್ಬುಬೂಕರ್ ಎಂಬವರ ಕಾಲಿಗೂ ಗುಂಡು ಹೊಕ್ಕಿತ್ತು. ದುಷ್ಕರ್ಮಿಗಳು ಬೊಲೆರೊ ವಾಹನದಲ್ಲಿ ಬಂದು ಗುಂಡಿನ ದಾಳಿ ನಡೆಸಿ, ವಾಹನವನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಸಬ್-ಅರ್ಬನ್ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments