Publish Date: Tue, 16 Nov 2021 (15:26 IST)
Updated Date: Tue, 16 Nov 2021 (15:29 IST)
ಪೇಜಾವರ ಶ್ರೀವಿಶ್ವೇಶರ ತೀರ್ಥ ಸ್ವಾಮೀಜಿ ದಲಿತ ಕೇರಿ ಭೇಟಿಯ ಕುರಿತ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರ ಹೇಳಿಕೆಯ ವಿರುದ್ಧ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೃಷ್ಣರಾಜ್ ಎಂಬವರು ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಹಂಸಲೇಖ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಸಾಮಾಜಿಕ ಸಾಮರಸ್ಯಕ್ಕಾಗಿ ಪೇಜಾವರ ಶ್ರೀಗಳು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಲೇವಡಿ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.