Webdunia - Bharat's app for daily news and videos

Install App

ಬೆಂಗಳೂರಿನ ನ್ಯಾಷನಲ್ ಪಬ್ಲಿಕ್ ಶಾಲೆ ವಿರುದ್ಧ ಎಫ್ ಐಆರ್!

Webdunia
ಭಾನುವಾರ, 29 ಮೇ 2022 (20:54 IST)
ಶಿಕ್ಷಣ ಅನ್ನುವುದು ಈಗ ದುಬಾರಿಯಾಗಿದೆ. ಬಡಮಕ್ಕಳಿಗೆ ಇಷ್ಟು ದೊಡ್ಡ ಮೊತ್ತ ತುಂಬಿ ಶಿಕ್ಷಣ ಪಡೆಯುವುದು ಕಷ್ಟ ಎಂಬ ಕಾರಣಕ್ಕೆ ರಾಜ್ಯ ಸರಕಾರ ಖಾಸಗಿ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳಿಗೂ ಶಿಕ್ಷಣ ದೊರೆಯಲು ಅನುಕೂಲವಾಗಲಿ ಎಂಬ ಕಾರಣಕ್ಕೆ ಆರ್ ಟಿಇ (RTE) ನಿಯಮ ಜಾರಿಗೆ ತಂದಿದೆ. ಆದರೆ ಖಾಸಗಿ ಶಾಲೆಗಳು ಬಡ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಿಕೊಳ್ಳದೇ ಇರಲು ಇನ್ನಿಲ್ಲದ ಅಡ್ಡದಾರಿಗಳನ್ನು ಹುಡುಕಿ ಸಿಕ್ಕಿ ಬೀಳುತ್ತಿವೆ.
ಹಾಗೆ ಅಡ್ಡದಾರಿ ಹಿಡಿದ ಶಿಕ್ಷಣ ಸಂಸ್ಥೆಯೊಂದು ದಾಖಲೆ ಸಮೇತ ಸಿಕ್ಕಿಬಿದ್ದಿದ್ದು, ಶಿಕ್ಷಣ ಇಲಾಖೆ ಈ ಸಂಸ್ಥೆ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡ್ತೀವಿ. ಬಡಮಕ್ಕಳ ಪರ ಇದ್ದೀವಿ. ನಮ್ಮ ಲಾಭರಹಿತ ಸಂಸ್ಥೆ ಎನ್ ಜಿಒ ಆಗಿದೆ. ಸೇವೆಯೇ ನಮ್ಮ ಧರ್ಮ ಎಂದು ಬೊಬ್ಬೆ ಹೊಡೆದುಕೊಳ್ಳುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೇ ಈ ರೀತಿ ಶಿಕ್ಷಣ ಇಲಾಖೆಗೆ, ಸಾರ್ವಜನಿಕರಿಗೆ ವಂಚಿಸಲು ಹೋಗಿ ರೆಡ್ ಹ್ಯಾಂಡಾಗಿ ಸಿಕ್ಕಬಿದ್ದಿದೆ. 
ಶಿಕ್ಷಣ ಇಲಾಖೆಯ ಸೂಚನೆ ಮೇರೆಗೆ ಬೆಂಗಳೂರಿನ ಪೊಲೀಸರು ಈ ಶಿಕ್ಷಣ ಸಂಸ್ಥೆಯ 5 ಶಾಲೆಗಳ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದೆ. ಅಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಯಾವುದು? ಅವರು ಮಾಡಿರುವ ವಂಚನೆ ಏನು ಎಂಬುದು ವಿವರವಾಗಿ ನೀಡಿದ್ದೇವೆ ನೋಡಿ.
ನ್ಯಾಷನಲ್ ಪಬ್ಲಿಕ್ ಸ್ಕೂಲ್ (National Public School) ಟ್ರಸ್ಟ್ ನಡೆಸಿಕೊಂಡು ಬರುತ್ತಿರುವ ಬೆಂಗಳೂರಿನ ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ಬಳಿ ಇರುವ ನ್ಯಾಷನಲ್ ಪಬ್ಲಿಕ್ ಶಾಲೆ ಆಡಳಿತ ಮಂಡಳಿ ನಕಲಿ ಅಲ್ಪ ಸಂಖ್ಯಾತ ಘೋಷಣ ಪ್ರಮಾಣ ಪತ್ರವನ್ನು ರಾಷ್ಟ್ರೀಯ ಉರ್ದು (Urdu) ಮತ್ತು ಇತರೆ ಅಲ್ಪ ಸಂಖ್ಯಾತ ನಿರ್ದೇಶನಾಲಯಕ್ಕೆ ತೋರಿಸಿ ಸಿಬಿಎಸ್ ಇ (CBSE) ಮತ್ತು ಸಿಐಎಸ್ ಸಿಇ ಶಿಕ್ಷಣಕ್ಕೆ ಅನುಮತಿ ಪಡೆದು ರಾಜ್ಯದ ಆರ್ ಟಿಇ ವಿದ್ಯಾರ್ಥಿಗಳಿಗೆ ವಿನಾಯಿತಿ ಪಡೆಯಲು ಯತ್ನಿಸಿ ಸಿಕ್ಕಿಬಿದ್ದಿದೆ.
ಶಿಕ್ಷಣ ಕಾಯ್ದೆ ಹಕ್ಕು 2009 ಸೆಕ್ಷನ್-2 (ಎನ್) (4) ಅನ್ವಯ ನ್ಯಾಷನಲ್ ಪಬ್ಲೀಕ್ ಶಾಲೆಯು ಅನುದಾನ ರಹಿತ, ಅಲ್ಪ ಸಂಖ್ಯಾತವಲ್ಲದ ಶಿಕ್ಷಣ ಕಾಯ್ದೆ 2009ಕ್ಕೆ ಅನ್ವಯವಾಗುತ್ತದೆ. ಆದರೆ ಶಾಲೆಯ ಆಡಳಿತ ಮಂಡಳಿ ಈ ನಿಯಮಗಳನ್ನು ಉಲ್ಲಂಘಿಸಿ ಆರ್ ಟಿಇ ಸೆಕ್ಷನ್ (12) (1) (ಸಿ)ಯಿಂದ ವಿನಾಯಿತಿ ಪಡೆಯಲು ಅಡ್ಡದಾರಿ ತುಳಿದಿದೆ. ಈ ಮೂಲಕ ಹಿಂದುಳಿದ ಮಕ್ಕಳಿಗೆ ಆರ್ ಟಿಇ ಕಾಯ್ದೆಯಡಿ ಪ್ರವೇಶ ನಿರಾಕರಿಸಿರುವುದು ದೃಢಪಟ್ಟಿದೆ.
ಆರ್ ಟಿಇ ಸೆಕ್ಷನ್ (12) (1) (ಸಿ) ನಿಯಮ ಏನು ಹೇಳುತ್ತದೆ?
ಆರ್ ಟಿಇ ಸೆಕ್ಷನ್ (12) (1) (ಸಿ) ನಿಯಮದ ಪ್ರಕಾರ ಖಾಸಗಿ ಶಾಲೆಗಳು ಹಿಂದುಳಿದ ಹಾಗೂ ದುರ್ಬಲ ವರ್ಗದ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಹೊಂದಿದ್ದು, ಈ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಶಾಲೆಯ ಒಟ್ಟು ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ.1ರಷ್ಟು ಬಡ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು. ಅಲ್ಲದೇ ಮಕ್ಕಳ ಶಿಕ್ಷಣ ಹಕ್ಕು ವರದಿ ಪ್ರಕಾರ ಬಡ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಅವಕಾಶ ನೀಡುವುದು ಮಾತ್ರವಲ್ಲ, ಅವರನ್ನು ಇತರೆ ವಿದ್ಯಾರ್ಥಿಗಳಂತೆ ಸಮಾನ ರೀತಿಯಲ್ಲಿ ಪರಿಗಣಿಸಬೇಕು. ಅಲ್ಲದೇ ಆತನ ಶಿಕ್ಷಣ ಅವಧಿ ಮುಗಿಯುವವರೆಗೂ ಉಚಿತ ಶಿಕ್ಷಣ ನೀಡಬೇಕು.
ಬೆಂಗಳೂರಿನ ಬಸವೇಶ್ವರ ನಗರ, ವಿಜಯನಗರ ಸೇರಿದಂತೆ ಹಲವು ಪ್ರತಿಷ್ಠಿತ ಬಡಾವಣೆಗಳಲ್ಲಿ ತಮ್ಮ ಶಾಲೆಗಳ ಶಾಖೆಗಳನ್ನು ಹೊಂದಿರುವ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮಕ್ಕಳನ್ನು ಸುಲಿಗೆ ಮಾಡುವುದು ಮಾತ್ರವಲ್ಲ, ಶಿಕ್ಷಣ ಇಲಾಖೆಯನ್ನೂ ವಂಚಿಸಿರುವುದು ಆಘಾತಕಾರಿ ವಿಷಯವಾಗಿದೆ. ಈ ಸಂಸ್ಥೆ ಶಿಕ್ಷಣ ಇಲಾಖೆಯನ್ನು ವಂಚಿಸಿರುವುದು ಒಂದು ಪ್ರಕರಣವಾದರೆ, ಈ ರೀತಿ ಇನ್ನೆಷ್ಟು ವಂಚನೆ ಮಾಡುತ್ತಿದೆಯೋ ಮಕ್ಕಳು ಹಾಗೂ ಪೋಷಕರನ್ನು ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ವಂಚಿಸುತ್ತಿದೆಯೋ ಎಂಬುದರ ಬಗ್ಗೆ ಇಲಾಖೆ ಹಾಗೂ ಪೊಲೀಸರು ಗಮನ ಹರಿಸಬೇಕಾಗಿದೆ.
ನ್ಯಾಷನಲ್ ಪಬ್ಲಿಕ್ ಸ್ಕೂಲ್ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಗಿರುವುದರಿಂದ ಪೊಲೀಸರು ಈ ತನಿಖೆಯ ಹಾದಿಯನ್ನು ಎಲ್ಲಿ ತಪ್ಪಿಸುತ್ತಾರೋ ಅಥವಾ ತನಿಖೆ ನಡೆಸದೇ ದೂರು ಧೂಳು ತಿನ್ನುವಂತೆ ಮಾಡುತ್ತಾರೋ ಎಂಬ ಅನುಮಾನಗಳು ಕೂಡ ಪೋಷಕರನ್ನು ಕಾಡತೊಡಗಿದೆ. ಆದ್ದರಿಂದ ಈ ರೀತಿಯ ಶಿಕ್ಷಣ ಸಂಸ್ಥೆಯ ಮೇಲೆ ಶೀಘ್ರ ತನಿಖೆ ನಡೆಸಿ ಶಿಕ್ಷೆ ಕೊಡಿಸಿದರೆ ಬೆಂಗಳೂರು ಮಾತ್ರವಲ್ಲ, ರಾಜ್ಯದ ಇತರೆ ಖಾಸಗಿ ಶಾಲೆಗಳಿಗೂ ಭಯ ಬರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments