Webdunia - Bharat's app for daily news and videos

Install App

PayCm ಫ್ಲ್ಯಾಗ್​​​ ಹಿಡಿದ ವ್ಯಕ್ತಿ ಮೇಲೆ FIR

Webdunia
ಶನಿವಾರ, 1 ಅಕ್ಟೋಬರ್ 2022 (17:02 IST)
ನಿನ್ನೆ ರಾಜ್ಯದಲ್ಲಿ ಆರಂಭವಾಗಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್, ಧ್ವಜ ಹಿಡಿದು ಹೆಜ್ಜೆ ಹಾಕಿದ್ದ ಯುವಕನ ಮೇಲೆ FIR ದಾಖಲಾಗಿದೆ. ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಜೋಡೋ ಯಾತ್ರೆಯಲ್ಲಿ ಈತ ಪೇಸಿಎಂ ಎಂಬ ಟೀ ಶರ್ಟ್ ಹಾಗೂ ಧ್ವಜ ಹಿಡಿದು ಹೆಜ್ಜೆ ಹಾಕಿದ್ದು, ಬಿಜೆಪಿ 40% ಸರ್ಕಾರ, ಯುವಕರಿಗೆ ಉದ್ಯೋಗ ಕೊಡದೆ ಬೀದಿಪಾಲು ಮಾಡುತ್ತಿದೆ. ಈ ಸರ್ಕಾರವನ್ನು ತೆಗೆದೇ ತೆಗೆಯುತ್ತೇವೆ ಎಂದು ಆಕ್ರೋಶ ಹೊರಹಾಕಿದ್ರು. ಗುಂಡ್ಲುಪೇಟೆ ಪುರಸಭಾ ಸದಸ್ಯ ಕಿರಣ್ ಗೌಡ ಹಾಗೂ ಸುರೇಶ್ ಎಂಬುವರು ಚಾಮರಾಜನಗರ ಸಿಇಎನ್ ಠಾಣೆಗೆ ದೂರು ನೀಡಿದ್ದು, ರಾಜ್ಯದ ಮುಖ್ಯಮಂತ್ರಿಗಳಿಗೆ ಅವಮಾನ ಮಾಡುವ ರೀತಿ ನಡೆದುಕೊಳ್ಳುತ್ತಿರುವ ಈ ಯುವಕನನ್ನು ಶೀಘ್ರದಲ್ಲೇ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಯುವಕನ ವಿರುದ್ಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments