Webdunia - Bharat's app for daily news and videos

Install App

ಸಾದ್ವಿ ಪ್ರಜ್ಞಾಸಿಂಗ್ ವಿರುದ್ಧ FIR

Webdunia
ಗುರುವಾರ, 29 ಡಿಸೆಂಬರ್ 2022 (19:46 IST)
ಪ್ರಚೋದನಕಾರಿ ಹೇಳಿಕೆ ನೀಡಿದ BJP ಸಂಸದೆ ಸಾದ್ವಿ ಪ್ರಜ್ಞಾಸಿಂಗ್ ಅವರ ವಿರುದ್ಧ ಕಾಂಗ್ರೆಸ್ ದೂರು ನೀಡಿತ್ತು. ಈ  ದೂರಿನ ಆಧಾರದ ಮೇಲೆ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊನ್ನೆ ಹಿಂದೂ ಜಾಗರಣ ವೇದಿಕೆಯ ತ್ರೈ ವಾರ್ಷಿಕ ಸಮ್ಮೇಳನದಲ್ಲಿ ಸಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಆಡಿರುವ ಪ್ರಚೋದನಕಾರಿ ಮಾತುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ಇದರ ವಿರುದ್ಧ ರಾಜಕೀಯ ವಿಶ್ಲೇಷಕ ತೆಹಸೀನ್ ಪೂನಾವಾಲಾ ಎಂಬುವರು ದೂರು ದಾಖಲಿಸಿಕೊಳ್ಳುವಂತೆ ಟ್ವಿಟರ್​​​ನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೋಟೆ ಪೊಲೀಸರು, ಠಾಣೆಗೆ ಬಂದು ದೂರು ನೀಡುವಂತೆ ಸೂಚಿಸಿ ನೋಟಿಸ್​​ ನೀಡಿದ್ದರು. ಹಾಗಾಗಿ ಪೂನಾವಾಲ ಪರವಾಗಿ ಜಿಲ್ಲಾ ಕಾಂಗ್ರೆಸ್​​​ನಿಂದ BJP ಸಂಸದೆ ವಿರುದ್ಧ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಕೋಟೆ ಪೊಲೀಸರು 153A, 153B, 268 ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments