Publish Date: Wed, 13 Apr 2022 (19:33 IST)
Updated Date: Wed, 13 Apr 2022 (19:35 IST)
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಈಶ್ವರಪ್ಪ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ FIR ದಾಖಲಾಗಿದೆ. ಈಶ್ವರಪ್ಪ ಆಪ್ತರಾದ ಬಸವರಾಜ್ ಹಾಗೂ ರಮೇಶ್ ವಿರುದ್ಧವೂ FIR ದಾಖಲಾಗಿದೆ. ರಸ್ತೆ ಕಾಮಗಾರಿ ಹಣ ಬಿಡುಗಡೆ ಆಗಿಲ್ಲದ್ದಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಹೆಸರನ್ನು ಬರೆದಿಟ್ಟು ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಸಂತೋಷ್ ಸೋದರ ಸಂಬಂಧಿ ಪ್ರಶಾಂತ್ ಪಾಟೀಲ್ ದೂರಿನನ್ವಯ ಐಪಿಸಿ ಸೆಕ್ಷನ್ 306, 304ರಡಿ ಪ್ರಕರಣ ದಾಖಲಾಗಿದೆ. ಅಲ್ಲದೇ, ಮೂವರ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಮನವಿ ಸಲ್ಲಿಸಿದ್ದಾರೆ.