Webdunia - Bharat's app for daily news and videos

Install App

ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆರ್‌: ಬಂಧನ ಭೀತಿ

Sampriya
ಶುಕ್ರವಾರ, 14 ಜೂನ್ 2024 (18:56 IST)
Photo Courtesy X
ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ಮತ್ತು ಜಲಶಕ್ತಿ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಪುತ್ರ ಡಾ.ಅರುಣ್‌ ಸೋಮಣ್ಣ ವಿರುದ್ಧ ವಂಚನೆ, ಜೀವ ಬೆದರಿಕೆ ಹಾಕಿದ ಆರೋಪದಡಿ ಬೆಂಗಳೂರಿನ ಸಂಜಯನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ ಐ ಆರ್‌ ದಾಖಲಾಗಿದೆ.

ದೂರುದಾರರು ನ್ಯಾಯಾಲಯದ ಮೊರೆ ಹೋಗಿ ಆದೇಶ ತಂದು ದೂರು ದಾಖಲಿಸಿದ್ದಾರೆ. ಹೀಗಾಗಿ, ಅರುಣ್‌ ಸೋಮಣ್ಣಗೆ ಬಂಧನ ಭೀತಿ ಎದುರಾಗಿದೆ  ಎಂದು ತಿಳಿದುಬಂದಿದೆ.

ಈವೆಂಟ್‌ ಮ್ಯಾನೇಜ್‌ ಮೆಂಟ್‌ ಕಂಪನಿ ವ್ಯವಹಾರದಲ್ಲಿ ಸಂಜಯನಗರದ ನಿವಾಸಿಗಳಾಗಿರುವ ದಂಪತಿಗೆ ಅರುಣ್‌ ವಂಚಿಸಿದ್ದಾರೆ ಎಂಬ ಗಂಭೀರ ಆರೋಪ ಇದಾಗಿದೆ. ಸಂಜಯನಗರದ ಎಇಸಿಎಸ್‌ ಲೇಔಟ್‌ ನಿವಾಸಿ ತೃಪ್ತಿ ಹೆಗಡೆ ಮತ್ತು ಮಧ್ವರಾಜ್‌ ದಂಪತಿ ಈ ದೂರು ಸಲ್ಲಿಸಿದ್ದಾರೆ. ತೃಪ್ತಿ ಹೆಗಡೆ ದಂಪತಿ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಈ ದೂರಿನ ವಿಚಾರಣೆ ನಡೆಸಿದ 37ನೇ ಚೀಫ್‌ ಮೆಟ್ರೋಪಾಲಿಟಿನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ದೂರು ದಾಖಲಿಸಿಕೊಳ್ಳಲು ಆದೇಶಿಸಿತ್ತು. ಕೋರ್ಟ್‌ ಆದೇಶದಂತೆ ಪೊಲೀಸರು ಅರುಣ್‌ ಸೋಮಣ್ಣ, ಪ್ರಮೋದ್‌ ರಾವ್‌ ಮತ್ತು ಜೀವನ್‌ ಎಂಬುವರ ವಿರುದ್ಧ ಎಫ್ ಐ ಆರ್‌ ದಾಖಲಿಸಿಕೊಂಡಿದ್ದಾರೆ.

ಸಂಜಯನಗರ ಪೊಲೀಸರು ಅರುಣ್‌ ವಿರುದ್ಧ ಮಾನಸಿಕ ಮತ್ತು ದೈಹಿಕ ಹಿಂಸೆ, ಅವಮಾನ, ಜೀವಭಯ, ವಂಚನೆ,ಅಪಹರಣ ಮತ್ತಿತರ ಆರೋಪಗಳನ್ನು ಹೊರಿಸಿ ಎಫ್‌ ಐಆರ್‌ ದಾಖಲು ಮಾಡಿದ್ದಾರೆ. ಈ ಪ್ರಕರಣಗಳು ಜಾಮೀನು ರಹಿತ ಪ್ರಕರಣಗಳಾಗಿದ್ದು, ಅರುಣ್‌ ಮತ್ತು ಅವರ ಮತ್ತಿಬ್ಬರು ಸಂಗಡಿಗರು ಬಂಧನ ಭೀತಿಯನ್ನು ಎದುರಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಜವರಾಯನಂತೆ ಬಂದ ಹಾಲಿನ ವಾಹನ: ರಸ್ತೆಯಲ್ಲೇ ಪ್ರಾಣಬಿಟ್ಟ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು

ಮುಂದಿನ ಸುದ್ದಿ
Show comments