Publish Date: Sat, 19 Dec 2020 (11:42 IST)
Updated Date: Sat, 19 Dec 2020 (11:45 IST)
ಬಾಗಲಕೋಟೆ : ಪೊಲೀಸ್ ಠಾಣೆಗೆ ನುಗ್ಗಿ ಗಲಾಟೆ ಮಾಡಿ ಕರ್ತವ್ಯ ನಿರತ ಪೊಲೀಸ್ ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದ ಮೇಲೆ ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ.
ಕೇಸ್ ವೊಂದಕ್ಕೆ ಸಂಬಂಧಪಟ್ಟಂತೆ ಅವರ ಬೆಂಬಲಿಗರನ್ನು ವಿಚಾರಣೆ ಮಾಡಿದ್ದಕ್ಕೆ ಬಾಗಲಕೋಟೆ ಜಿಲ್ಲೆ ಇಳಕಲ್ ಪೊಲೀಸ್ ಠಾಣೆಗೆ ನುಗ್ಗಿ ಹೇಯ್ ಮಿಸ್ಟರ್ ಇವರಿಗೆ ಏನ್ ವಿಚಾರಣೆ ಮಾಡ್ತೀಯ? ಜಾಮೀನು ಪತ್ರ ತೆಗೆದುಕೊಂಡು ಕಳಿಸೋದಷ್ಟೇ ನಿನ್ನ ಕೆಲಸ. ಅವರಿಗ್ಯಾಕೆ ನೋಟೀಸ್ ಕೊಡುತ್ತೀಯಾ ಎಂದು ಆವಾಜ್ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ಅಯ್ಯನಗೌಡ ದೂರಿನ ಮೇರೆಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ.