Webdunia - Bharat's app for daily news and videos

Install App

ಹಣ ವಾಪಸ್ ಕೊಡಿ ಇಲ್ಲಾಂದ್ರೆ ಜೆಡಿಎಸ್‌‌ಗೆ ಸೇರ್ಪಡೆಯಾಗಿ: ನಾಯಕನ ಧಮ್ಕಿ

Webdunia
ಸೋಮವಾರ, 23 ಏಪ್ರಿಲ್ 2018 (18:48 IST)
ಜಿಲ್ಲೆಯ ಮಧುಗಿರಿ ಮತ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ. ಕೊಡಿಗೇನಹಳ್ಳಿ ಹೋಬಳಿಯಲ್ಲಿ ಕಳೆದ ವರ್ಷ ಕನಕ ಜಯಂತಿ ಆಚರಣೆಗೆ ಕೊಟ್ಟಿರುವ ಹಣ ವಾಪಸ್ಸು ನೀಡಬೇಕು ಇಲ್ಲವೇ ಜೆಡಿಎಸ್ ಗೆ  ಬರಬೇಕೆಂದು ಜೆಡಿಎಸ್ ಮುಖಂಡ ರವಿಕುಮಾರ್  ಪೋನ್ ನಲ್ಲಿ  ಕಿರುಕುಳ ನೀಡುತ್ತಿದ್ದಾರೆಂಬ ದೂರಿನ ಮೇರೆಗೆ ತಹಶೀಲ್ದಾರ್ ಅನೀಲ್ ಮತ್ತು ಮಧುಗಿರಿ ಕ್ಷೇತ್ರದ  ಉಪ ಚುನಾವಣಾಧಿಕಾರಿಗಳೂ ದೂರು ಪಡೆದು ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಘಟನೆ ಆಗಿದ್ದಿಷ್ಟು:  ಕೊಡಿಗೇನಹಳ್ಳಿ ಹೋಬಳಿಯ ಕಸಿನಾಯಕನಹಳ್ಳಿ ಗ್ರಾಮದಲ್ಲಿ 2017 ನವೆಂಬರ್ ನಲ್ಲಿ ಕನಕದಾಸರ ಜಯಂತಿ ಕಾರ್ಯಕ್ರಮ  ನಡೆಸಲು ಅದೇ ಗ್ರಾಮದ ನಾಗಭೂಷಣ್  ಎಂಬ ವ್ಯಕ್ತಿಗೆ  ಜೆಡಿಎಸ್ ಮುಖಂಡ ರವಿಕುಮಾರ್ ಎಂಬುವವರು   20,000  ರೂಪಾಯಿ ನೀಡಿದ್ದರು.
 
 ಆದರೆ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಜೆಡಿಎಸ್ ಅಭ್ಯರ್ಥಿ ಎಂ.ವಿ. ವೀರಭದ್ರಯ್ಯ ಅವರನ್ನ ಕರೆಸಲಿಲ್ಲ ಮತ್ತು ನಾಗಭೂಷಣ್ ಎಂಬ ವ್ಯಕ್ತಿ ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಹೋಗಿದ್ದಾನೆಂದು ಜೆಡಿಎಸ್ ಮುಖಂಡ ರವಿಕುಮಾರ್ ಚುನಾವಣಾ ನೀತಿ ಸಂಹಿತೆ ಇದ್ದರೂ ಪಾಲಿಸದೆ  ಕನಕ ಜಯಂತಿಗೆ ಕೊಟ್ಟಿರುವ ಹಣ ವಾಪಸ್ಸು ನೀಡಬೇಕು. ಇಲ್ಲವೇ ಜೆಡಿಎಸ್ ಗೆ ವಾಪಸ್ಸು ಬರಬೇಕೆಂದು ಪೋನ್ ಕರೆ ಮಾಡಿ ಕಿರುಕುಳ ನೀಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ಹೀಗಾಗಿ  ಜೆಡಿಎಸ್ ಮುಖಂಡ ರವಿಕುಮಾರ್ ವಿರುದ್ಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ಮೋಹನ್ ಕುಮಾರ್ ತಂಡ ತನಿಖೆ ಕೈಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments