ಹಣ ವಾಪಸ್ ಕೊಡಿ ಇಲ್ಲಾಂದ್ರೆ ಜೆಡಿಎಸ್‌‌ಗೆ ಸೇರ್ಪಡೆಯಾಗಿ: ನಾಯಕನ ಧಮ್ಕಿ

Webdunia
ಸೋಮವಾರ, 23 ಏಪ್ರಿಲ್ 2018 (18:48 IST)
ಜಿಲ್ಲೆಯ ಮಧುಗಿರಿ ಮತ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ. ಕೊಡಿಗೇನಹಳ್ಳಿ ಹೋಬಳಿಯಲ್ಲಿ ಕಳೆದ ವರ್ಷ ಕನಕ ಜಯಂತಿ ಆಚರಣೆಗೆ ಕೊಟ್ಟಿರುವ ಹಣ ವಾಪಸ್ಸು ನೀಡಬೇಕು ಇಲ್ಲವೇ ಜೆಡಿಎಸ್ ಗೆ  ಬರಬೇಕೆಂದು ಜೆಡಿಎಸ್ ಮುಖಂಡ ರವಿಕುಮಾರ್  ಪೋನ್ ನಲ್ಲಿ  ಕಿರುಕುಳ ನೀಡುತ್ತಿದ್ದಾರೆಂಬ ದೂರಿನ ಮೇರೆಗೆ ತಹಶೀಲ್ದಾರ್ ಅನೀಲ್ ಮತ್ತು ಮಧುಗಿರಿ ಕ್ಷೇತ್ರದ  ಉಪ ಚುನಾವಣಾಧಿಕಾರಿಗಳೂ ದೂರು ಪಡೆದು ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಘಟನೆ ಆಗಿದ್ದಿಷ್ಟು:  ಕೊಡಿಗೇನಹಳ್ಳಿ ಹೋಬಳಿಯ ಕಸಿನಾಯಕನಹಳ್ಳಿ ಗ್ರಾಮದಲ್ಲಿ 2017 ನವೆಂಬರ್ ನಲ್ಲಿ ಕನಕದಾಸರ ಜಯಂತಿ ಕಾರ್ಯಕ್ರಮ  ನಡೆಸಲು ಅದೇ ಗ್ರಾಮದ ನಾಗಭೂಷಣ್  ಎಂಬ ವ್ಯಕ್ತಿಗೆ  ಜೆಡಿಎಸ್ ಮುಖಂಡ ರವಿಕುಮಾರ್ ಎಂಬುವವರು   20,000  ರೂಪಾಯಿ ನೀಡಿದ್ದರು.
 
 ಆದರೆ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಜೆಡಿಎಸ್ ಅಭ್ಯರ್ಥಿ ಎಂ.ವಿ. ವೀರಭದ್ರಯ್ಯ ಅವರನ್ನ ಕರೆಸಲಿಲ್ಲ ಮತ್ತು ನಾಗಭೂಷಣ್ ಎಂಬ ವ್ಯಕ್ತಿ ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಹೋಗಿದ್ದಾನೆಂದು ಜೆಡಿಎಸ್ ಮುಖಂಡ ರವಿಕುಮಾರ್ ಚುನಾವಣಾ ನೀತಿ ಸಂಹಿತೆ ಇದ್ದರೂ ಪಾಲಿಸದೆ  ಕನಕ ಜಯಂತಿಗೆ ಕೊಟ್ಟಿರುವ ಹಣ ವಾಪಸ್ಸು ನೀಡಬೇಕು. ಇಲ್ಲವೇ ಜೆಡಿಎಸ್ ಗೆ ವಾಪಸ್ಸು ಬರಬೇಕೆಂದು ಪೋನ್ ಕರೆ ಮಾಡಿ ಕಿರುಕುಳ ನೀಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ಹೀಗಾಗಿ  ಜೆಡಿಎಸ್ ಮುಖಂಡ ರವಿಕುಮಾರ್ ವಿರುದ್ಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ಮೋಹನ್ ಕುಮಾರ್ ತಂಡ ತನಿಖೆ ಕೈಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡುವೆ ರಾಷ್ಟ್ರೀಯ ನಾಯಕರ ಭೇಟಿಯಾದ ವಿಜಯೇಂದ್ರ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments