Select Your Language

Notifications

webdunia
webdunia
webdunia
webdunia

ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವರಲಕ್ಷ್ಮಿ ವಿರುದ್ಧ ಎಫ್‌ಐಆರ್

ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವರಲಕ್ಷ್ಮಿ ವಿರುದ್ಧ ಎಫ್‌ಐಆರ್
ಬೆಂಗಳೂರು , ಶುಕ್ರವಾರ, 24 ಮಾರ್ಚ್ 2017 (19:22 IST)
ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಸಮಿತಿ ಅಧ್ಯಕ್ಷೆ ವರಲಕ್ಷ್ಮಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
 
ಒಂದೆಡೆ ಶಾಂತಿ ಮಂತ್ರ ಮತ್ತೊಂದಡೆ ಕಾನೂನಿನ ಅಸ್ತ್ರ ಬಳಕೆ ಮಾಡಲಾಗಿದೆ ಎಂದು ಕಾರ್ಯನಿರ್ವಾಹಕ ಅಧ್ಯಕ್ಷೆ ಎನ್.ಸುಧಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ವೇತನ ಹೆಚ್ಚಳ ಮತ್ತು ಸೇವಾ ಭದ್ರತೆ ನೀಡಬೇಕು ಎಂದು ಒತ್ತಾಯಿಸಿ ನಾಲ್ಕು ದಿನಗಳ ಕಾಲ ಅಂಗನವಾಡಿ ನೌಕರರು ಪ್ರತಿಭಟನೆಯಲ್ಲಿ ತೊಡಗಿದ್ದರು. 
 
ಸಿಎಂ ಸಿದ್ದರಾಮಯ್ಯ ಮತ್ತು ವರಲಕ್ಷ್ಮಿ ನಡುವೆ ನಡೆದ ಸಂಧಾನ ಯಶಸ್ವಿಯಾಗಿದ್ದರಿಂದ ಪ್ರತಿಭಟನೆಯನ್ನು ಕೈಬಿಡಲಾಗಿತ್ತು. ಪ್ರತಿಭಟನೆ ಕೈಬಿಟ್ಟ ನಂತರ ವರಲಕ್ಷ್ಮಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಎಸ್.ಎಂ.ಕೃಷ್ಣ