Select Your Language

Notifications

webdunia
webdunia
webdunia
webdunia

ಎಫ್‌ಐಆರ್ ದಾಖಲು: ನ್ಯಾಯ ದೊರೆಯುವ ವಿಶ್ವಾಸವಿದೆ ಎಂದ ಪಾವನಾ

ಎಫ್‌ಐಆರ್
ಮಡಿಕೇರಿ , ಸೋಮವಾರ, 18 ಜುಲೈ 2016 (19:07 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿರುವ ಗಣಪತಿ ಪತ್ನಿ ಪಾವನಾ, ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.
 
ರಂಗಸಮುದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಣಪತಿ ಪತ್ನಿ ಪಾವನಾ, ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅನ್ನಪೂರ್ಣೇಶ್ವರಿ ಅವರು ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರೊನಬ್ ಮೊಹಂತಿ ಮತ್ತು ಎಂ.ಎಂ.ಪ್ರಸಾದ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಡಿಕೇರಿ ಟೌನ್‌ ಪೊಲೀಸರಿಗೆ ಸೂಚನೆ ನೀಡಿರುವುದು ಸಂತಸ ತಂದಿದೆ. ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ.ಕೆ.ಗಣಪತಿ ಅವರ ಪುತ್ರ ನೇಹಾಲ್ ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು.
 
ಎಫ್‌ಐಆರ್ ಪ್ರತಿ ಕೈಗೆ ಸಿಕ್ಕ ಮೇಲೆ ಹೈಕೋರ್ಟ್ ಮೊರೆ ಹೋಗುವ ಕುರಿತು ತೀರ್ಮಾನಿಸುತ್ತೇನೆ ಎಂದು ಡಿವೈಎಸ್‌ಪಿ ಎಂ.ಕೆ.ಗಣಪತಿ ಪತ್ನಿ ಪಾವನಾ ಸ್ಪಷ್ಟಪಡಿಸಿದ್ದಾರೆ.
 
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಗಣಪತಿ ಪ್ರಕರಣ: ಅಂತೂ ಇಂತೂ ಕೊನೆಗೂ ರಾಜೀನಾಮೆ ನೀಡಿದ ಕೆ.ಜೆ.ಜಾರ್ಜ್