Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಅಗ್ನಿ ಅವಘಡ...!!

Webdunia
ಗುರುವಾರ, 18 ನವೆಂಬರ್ 2021 (15:33 IST)
ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸುವ ಸಂದರ್ಭದಲ್ಲಿ ಸಿಲಿಂಡರ್ ಸೋಟಗೊಂಡ ಪರಿಣಾಮ ಮೂವರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಇಟ್ಟುಮಡುವಿನ ಮಂಜುನಾಥನಗರದ ಕಿಶೋರ್ ಎಂಬುವವರ ಮನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ 2.20ರಲ್ಲಿ ಕಿಶೋರ್ ಅವರ ಮನೆಯ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಅಕ್ಕಪಕ್ಕದವರು ಗಮನಿಸಿ ಕೂಗಿಕೊಂಡಿದ್ದಾರೆ. ಕೂಗಾಟ-ಚೀರಾಟ ಕೇಳಿ ಎಚ್ಚರಗೊಂಡ ಎರಡನೆ ಮಹಡಿಯಲ್ಲಿ ವಾಸವಾಗಿದ್ದ ಕಿಶೋರ್ ಅವರು ಬಾಗಿಲು ತೆರೆದು ಹೊರಗೆ ಬರುತ್ತಿದ್ದಂತೆ ಬೆಂಕಿಯ ಬಿಸಿ ಮುಖಕ್ಕೆ ಬಡಿದಂತಾಗಿದೆ.
 
ತಕ್ಷಣ ಕಿಶೋರ್ ಅವರು ಪತ್ನಿ ಹಾಗೂ ಮಗುವಿನೊಂದಿಗೆ ಮನೆಯಿಂದ ಹೊರಗೆ ಬಂದು ಟೆರೆಸ್ ಗೇಟ್ ಒಡೆದು ಪಕ್ಕದ ಮನೆಯ ಕಟ್ಟಡಕ್ಕೆ ಹೋಗಿ ಪಾರಾಗಿದ್ದಾರೆ. ನಂತರ ನೆರೆಹೊರೆಯವರೊಂದಿಗೆ ಸೇರಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಷ್ಟೊತ್ತಿಗಾಗಲೇ ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ವಾಹನದೊಂದಿಗೆ ಸ್ಥಳಕ್ಕೆ ದೌಡಾಯಿಸಿ ಕಾರಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸುತ್ತಿದ್ದಾಗ ಏಕಾಏಕಿ ಮಹಡಿಯ ಮೆಟ್ಟಿಲು ಕೆಳಗೆ ಅಳವಡಿಸಿದ್ದ ಸಿಲಿಂಡರ್‍ಗೆ ಬೆಂಕಿ ತಾಗಿ ಸೋಟಗೊಂಡಿದೆ.
 
ನೋಡನೋಡುತ್ತಿದ್ದಂತೆ ಸೋಟಗೊಂಡಿದ್ದರಿಂದ ಮೂವರು ಅಗ್ನಿಶಾಮಕ ಸಿಬ್ಬಂದಿಗಳಾದ ಹರೀಶ್, ಹೆಗಡೆ ಮತ್ತು ಮುತ್ತಪ್ಪ ಎಂಬುವವರು ಗಾಯಗೊಂಡಿದ್ದು, ತಕ್ಷಣ ಅವರನ್ನು ಅಪೊಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಶೂ ಹಾಕಿಕೊಂಡು ಹೋಮದಲ್ಲಿ ಪಾಲ್ಗೊಂಡ ಲಾಲೂ ಯಾದವ್

ಧರ್ಮಸ್ಥಳ ಅನಾಮಿಕ ದೂರುದಾರನ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಎಸ್ಐಟಿ

ಶಕ್ತಿ ಯೋಜನೆಗೆ ರೆಕಾರ್ಡ್ ಹಾಗಿರ್ಲಿ, ಸಾರಿಗೆ ನೌಕರರಿಗೆ ಸಂಬಳ ಹಾಕಿ: ಸಿಎಂಗೆ ನೆಟ್ಟಿಗರ ಕ್ಲಾಸ್

ಶಕ್ತಿ ಯೋಜನೆ ಗೋಲ್ಡನ್ ಬುಕ್ ರೆಕಾರ್ಡ್ ಪಟ್ಟಿಗೆ: ಸಿದ್ದರಾಮಯ್ಯ ಖುಷಿಗೆ ಹೇಳಿದ್ದೇನು ನೋಡಿ

ಮೋದಿ, ಪುಟಿನ್ ಭಾರೀ ಫ್ರೆಂಡ್ಸ್ ಎನ್ನುವುದಕ್ಕೆ ಇದೇ ಸಾಕ್ಷಿ

ಮುಂದಿನ ಸುದ್ದಿ
Show comments