Webdunia - Bharat's app for daily news and videos

Install App

ಅರಣ್ಯದಲ್ಲಿ ಮತ್ತೆ ಬೆಂಕಿ ಅವಘಡ; ಅಧಿಕಾರಿಗಳ ಎಡವಟ್ಟು ಏನು?

Webdunia
ಸೋಮವಾರ, 6 ಮೇ 2019 (13:11 IST)
ಅಧಿಕಾರಿಗಳ ಎಡವಟ್ಟಿನಿಂದಾಗಿ ಅರಣ್ಯಕ್ಕೆ ಬೆಂಕಿ ವ್ಯಾಪಿಸಿದ್ದು, ಅಪಾರ ಹಾನಿಗೆ ಕಾರಣವಾಗಿದೆ.

ದಕ್ಷಿಣ  ಕನ್ನಡ  ಜಿಲ್ಲೆಯ ಕಡಬ ತಾಲೂಕಿನ ಸುಂಕದಕಟ್ಟೆ ಗ್ರಾಮದ ಕೆ.ಎಫ್. ಡಿ.ಸಿ ರಬ್ಬರ್ ನಿಗಮದ ಅರಣ್ಯ ಪ್ರದೇಶಕ್ಕೆ ಬೆಂಕಿ ಆವರಿಸಿದೆ.

ರಬ್ಬರ್ ನಿಗಮ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ  ಮಧ್ಯಾಹ್ನ ಬಳಿಕ ಬೆಂಕಿ ಕಾಣಿಸಿಕೊಂಡು ಅರಣ್ಯಕ್ಕೆ ಹರಡಲಾರಂಭಿಸಿದೆ. 
ಈ ರೀತಿ ಬೆಂಕಿ ನಂದಿಸಲು ಪರದಾಡುವಂತಾಗಲು ಮುಖ್ಯ ಕಾರಣ ಕೆ.ಎಫ್.ಡಿ. ಸಿ ರಬ್ಬರ್ ನಿಗಮದ ಅಧಿಕಾರಿಗಳು ಎಂದು ಊರಿನವರು ದೂರುತ್ತಿದ್ದಾರೆ.

ಈ ಮೊದಲು ಇದೇ ರೀತಿ ಬೆಂಕಿ ಹತ್ತಿಕೊಂಡಾಗ ಸಾಮಾಜಿಕ ಕಳಕಳಿಯಿಂದ 150 ಜನ ಸಾರ್ವಜನಿಕರು ಬೆಂಕಿ ನಂದಿಸಲು ಕಷ್ಟ ಪಟ್ಟಿದ್ದರು. 
ಆಸಮಯದಲ್ಲಿ ತಡೆ ಬೇಲಿ ಕಿತ್ತು ಹೋಗಿದೆ ಎಂಬ ಕಾರಣ ಮುಂದಿಟ್ಟುಕೊಂಡು ರಬ್ಬರ್ ನಿಗಮದ ಅಧಿಕಾರಿಗಳು ಸಾರ್ವಜನಿಕರನ್ನು ತರಾಟೆಗೆ ತೆಗೆದುಕೊಂಡಿದ್ದರಂತೆ.

ಈ ವಿಚಾರಕ್ಕೆ ಕೆ.ಎಫ್.ಡಿ.ಸಿ. ರಬ್ಬರ್ ನಿಗಮದ ಅಧಿಕಾರಿಗಳ ಮೇಲೆ  ಬೇಸರಗೊಂಡ ಸಾರ್ವಜನಿಕರು ಈ ಬಾರಿ ಬೆಂಕಿ ಹತ್ತಿಕೊಂಡ ಸಂದರ್ಭದಲ್ಲಿ ಬೆಂಕಿ ನಂದಿಸಲು ಮುಂದಾಗಿಲ್ಲ ಎನ್ನಲಾಗಿದೆ. 

ರಬ್ಬರ್ ನಿಗಮದ ಅಧಿಕಾರಿಗಳ ವರ್ತನೆಯನ್ನು ಸಾರ್ವಜನಿಕರು ಖಂಡಿಸಿದ್ದು, ಬೆಂಕಿ ಆವರಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments