Webdunia - Bharat's app for daily news and videos

Install App

ಅರಣ್ಯದಲ್ಲಿ ಮತ್ತೆ ಬೆಂಕಿ ಅವಘಡ; ಅಧಿಕಾರಿಗಳ ಎಡವಟ್ಟು ಏನು?

Webdunia
ಸೋಮವಾರ, 6 ಮೇ 2019 (13:11 IST)
ಅಧಿಕಾರಿಗಳ ಎಡವಟ್ಟಿನಿಂದಾಗಿ ಅರಣ್ಯಕ್ಕೆ ಬೆಂಕಿ ವ್ಯಾಪಿಸಿದ್ದು, ಅಪಾರ ಹಾನಿಗೆ ಕಾರಣವಾಗಿದೆ.

ದಕ್ಷಿಣ  ಕನ್ನಡ  ಜಿಲ್ಲೆಯ ಕಡಬ ತಾಲೂಕಿನ ಸುಂಕದಕಟ್ಟೆ ಗ್ರಾಮದ ಕೆ.ಎಫ್. ಡಿ.ಸಿ ರಬ್ಬರ್ ನಿಗಮದ ಅರಣ್ಯ ಪ್ರದೇಶಕ್ಕೆ ಬೆಂಕಿ ಆವರಿಸಿದೆ.

ರಬ್ಬರ್ ನಿಗಮ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ  ಮಧ್ಯಾಹ್ನ ಬಳಿಕ ಬೆಂಕಿ ಕಾಣಿಸಿಕೊಂಡು ಅರಣ್ಯಕ್ಕೆ ಹರಡಲಾರಂಭಿಸಿದೆ. 
ಈ ರೀತಿ ಬೆಂಕಿ ನಂದಿಸಲು ಪರದಾಡುವಂತಾಗಲು ಮುಖ್ಯ ಕಾರಣ ಕೆ.ಎಫ್.ಡಿ. ಸಿ ರಬ್ಬರ್ ನಿಗಮದ ಅಧಿಕಾರಿಗಳು ಎಂದು ಊರಿನವರು ದೂರುತ್ತಿದ್ದಾರೆ.

ಈ ಮೊದಲು ಇದೇ ರೀತಿ ಬೆಂಕಿ ಹತ್ತಿಕೊಂಡಾಗ ಸಾಮಾಜಿಕ ಕಳಕಳಿಯಿಂದ 150 ಜನ ಸಾರ್ವಜನಿಕರು ಬೆಂಕಿ ನಂದಿಸಲು ಕಷ್ಟ ಪಟ್ಟಿದ್ದರು. 
ಆಸಮಯದಲ್ಲಿ ತಡೆ ಬೇಲಿ ಕಿತ್ತು ಹೋಗಿದೆ ಎಂಬ ಕಾರಣ ಮುಂದಿಟ್ಟುಕೊಂಡು ರಬ್ಬರ್ ನಿಗಮದ ಅಧಿಕಾರಿಗಳು ಸಾರ್ವಜನಿಕರನ್ನು ತರಾಟೆಗೆ ತೆಗೆದುಕೊಂಡಿದ್ದರಂತೆ.

ಈ ವಿಚಾರಕ್ಕೆ ಕೆ.ಎಫ್.ಡಿ.ಸಿ. ರಬ್ಬರ್ ನಿಗಮದ ಅಧಿಕಾರಿಗಳ ಮೇಲೆ  ಬೇಸರಗೊಂಡ ಸಾರ್ವಜನಿಕರು ಈ ಬಾರಿ ಬೆಂಕಿ ಹತ್ತಿಕೊಂಡ ಸಂದರ್ಭದಲ್ಲಿ ಬೆಂಕಿ ನಂದಿಸಲು ಮುಂದಾಗಿಲ್ಲ ಎನ್ನಲಾಗಿದೆ. 

ರಬ್ಬರ್ ನಿಗಮದ ಅಧಿಕಾರಿಗಳ ವರ್ತನೆಯನ್ನು ಸಾರ್ವಜನಿಕರು ಖಂಡಿಸಿದ್ದು, ಬೆಂಕಿ ಆವರಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

ಮುಂದಿನ ಸುದ್ದಿ
Show comments