Webdunia - Bharat's app for daily news and videos

Install App

ಮಧ್ಯರಾತ್ರಿ ಅಗ್ನಿ ದುರಂತ!

Webdunia
ಶುಕ್ರವಾರ, 4 ಫೆಬ್ರವರಿ 2022 (09:25 IST)
ಬೆಂಗಳೂರು : ಬೆಂಗಳೂರಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಗ್ನಿ ಅವಘಡ ಒಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಗ್ಯಾರೇಜ್ ಸುಟ್ಟು ಕರಕಲಾಗಿದೆ.

ವಿವೇಕನಗರ ಮುಖ್ಯರಸ್ತೆಯ ವನ್ನಾರ್ ಪೇಟ್ ಬಳಿಯ ಕಾರು ಗ್ಯಾರೇಜ್ ನಲ್ಲಿ ಈ ಅವಘಡ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅನುಮಾನಿಸಲಾಗಿದೆ. ಗ್ಯಾರೇಜ್ ನಲ್ಲಿದ್ಸ 3 ಬೈಕ್ 4 ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿವೆ.

ಅಷ್ಟೇ ಅಲ್ಲದೇ ಗ್ಯಾರೇಜ್ನಲ್ಲಿದ್ದ ಎರಡು ಸಿಲಿಂಡರ್ ಕೂಡ ಸ್ಪೋಟಗೊಂಡಿವೆ. ಸುಮಾರು 500 ಮೀಟರ್ ನಷ್ಟು ದೂರ ಸಿಲಿಂಡರ್ ಬ್ಲಾಸ್ಟ್ ಆದ ಶಬ್ಧ ಕೇಳಿಬಂದಿದೆ. ಸ್ಫೋಟದ ತೀವ್ರತೆಗೆ ಮಧ್ಯರಾತ್ರಿ ಏರಿಯಾ ಜನ ಗಾಬರಿಗೊಂಡಿದ್ದಾರೆ.

ನಾಸೀರ್ ಎಂಬುವವರ ಮಾಲೀಕತ್ವದ ಗ್ಯಾರೇಜ್ ಇದ್ದಾಗಿದ್ದು, ಸತತ ಒಂದುವರೆ ಗಂಟೆಗಳ ಕಾರ್ಯಾಚರಣೆ ಬಳಿಕ 3 ಅಗ್ನಿಶಾಮಕ ವಾಹನದಿಂದ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

ಇನ್ನೂ ಬೆಂಕಿ ಬೀಳುತ್ತಿದ್ದಂತೆ ಸ್ಥಳೀಯರು ಮಾಲೀಕರಿಗೆ ವಿಷಯ ತಿಳಿಸಿದ್ದಾರೆ.  ಧಗಧಗಿಸ್ತಿದ್ದ ಗ್ಯಾರೇಜ್ ನಿಂದ ಮಾಲೀಕ ಕಾರು ಹೊರ ತಂದಿದ್ದಾನೆ. ಪೋಲೊ,ಹ್ಯೂಂಡೈ ಕಂಪನಿ ಕಾರು ಸೇರಿದಂತೆ ಮೂರು ಕಾರುಗಳ ರಕ್ಷಣೆ ಮಾಡಿದ್ದಾನೆ. ಅದಾಗಿಯು ಗಾಜು ಒಡೆದಿದ್ದು,ಕಾರಿನ ಮುಂಭಾಗ ಸುಟ್ಟು ಹೋಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments