Webdunia - Bharat's app for daily news and videos

Install App

ಲಾರಿಯಲ್ಲಿ ಆಕಸ್ಮಿಕ ಬೆಂಕಿ: ಮದ್ಯ ನಾಶ

Webdunia
ಗುರುವಾರ, 5 ಮಾರ್ಚ್ 2015 (11:38 IST)
ಮದ್ಯದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ಲಾರಿಯಲ್ಲಿದ್ದ ಸಾವಿರಾರು ರೂಪಾಯಿಯ ಮದ್ಯ ಹಾಳಾಗಿರುವ ಘಟನೆ ನಗರದ ನಗರ ಪೊಲೀಸ್ ಠಾಣೆ ಎದುರು ಸಂಭವಿಸಿದೆ. 
 
ಮೂಲಗಳ ಪ್ರಕಾರ, ಈ ಮದ್ಯವನ್ನು ಹೊತ್ತೊಯ್ಯುತ್ತಿದ್ದ ಲಾರಿಯು ಬೆಂಗಳೂರಿನಿಂದ ಉತ್ತರ ಕರ್ನಾಟಕದ ಜಮಖಂಡಿ ಕಡೆ ಸಾಗಿತ್ತು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ತಗುಲಿದ ಕಾರಣ ಲಾರಿಯಲ್ಲಿದ್ದ ಮದ್ಯವೆಲ್ಲಾ ಹಾಳಾಗಿದ್ದು, ಪರಿಣಾಮ ಸಾವಿರಾರು ರೂ.ನಷ್ಟವಾಗಿದೆ. ಘಟನೆ ತಿಳಿದ ಅಗ್ನಿಶಾಮಕ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ದಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 
 
ಘಟನೆಗೆ ಕಾರಣವೇನು ಎಂಬ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಆದರೆ ಮದ್ಯದ ಬಾಟಲಿಗಳ ನಡುವೆಯೇ ತಿಕ್ಕಾಟ ನಡೆದಿರುವ ಕಾರಣ ಬೆಂಕಿ ಉತ್ಪತ್ತಿಯಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments