ವಿಮಾನ ಹಾರಾಟ ವೇಳೆ ಆಕಸ್ಮಿಕ ಬೆಂಕಿ

Webdunia
ಶುಕ್ರವಾರ, 20 ಫೆಬ್ರವರಿ 2015 (16:23 IST)
ನಗರದ ಯಲಹಂಕ ವಾಯುನೆಲೆಯಲ್ಲಿ 2015ರ ಏರ್ ಇಂಡಿಯಾ ಶೋ ನಡೆಯುತ್ತಿದ್ದ ವೇಳೆಯಲ್ಲಿ ವಿಮಾನ ಹಾರಾಟ ನಡೆಸುತ್ತಿದ್ದಾಗ ರನ್ ವೇ ಪಕ್ಕದಲ್ಲಿಯೇ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ನಡೆಯಿತು.
 
ರನ್ ವೇಯಲ್ಲಿ ವಿಮಾನಗಳು ಮೇಲಿಂದ ಮೇಲೆ ಹಾರುತ್ತಿದ್ದವು. ಈ ವೇಳೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸಾಕಷ್ಟು ಜಾಗಕ್ಕೆ ವಿಸ್ತರಿಸಿಕೊಂಡಿತು. ಇದರಿಂದ ಸಾರ್ವಜನಿಕರಲ್ಲಿ ಕೆಲ ಕಾಲ ಆಘಾತ ಉಂಟು ಮಾಡಿತ್ತು. ಆದರೆ ಘಟನೆ ಕಂಡ ಕೂಡಲೇ ಅಲ್ಲಿಯೇ ರಕ್ಷಣೆಗೆಂದಿದ್ದ ಎನ್‌ಡಿಆರ್‌ಎಫ್ ಸಿಬ್ಬಂದಿ ಬೆಂಕಿಯನ್ನು ಆರಿಸುವಲ್ಲಿ ಯಶಸ್ವಿಯಾದರು. ಇದರಿಂದ ಸಂಭವಿಸಬೇಕಿದ್ದ ಬೃಹತ್ ಅನಾಹುತವೊಂದು ತಪ್ಪಿತು. 
 
ಇನ್ನು ರನ್ ವೇ ಪಕ್ಕದಲ್ಲಿಯೇ ರಕ್ಷಣಾ ಸೈನಿಕರು ತಂಗಲು ಟೆಂಟ್‌ಗಳನ್ನು ಹಾಕಿಕೊಂಡಿದ್ದರು. ಅಲ್ಲದೆ ಬೆಂಕಿ ಕಾಣಿಸಿಕೊಂಡಿದ್ದ ಜಾಗದ ಪಕ್ಕದಲ್ಲಿಯೇ ಎರಡು ಜನರೇಟರ್‌ಗಳು ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಮುನ್ನೆಚ್ಚರಿಕೆ ಕ್ರಮ ವಹಿಸಿದ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸಲಿಲ್ಲ.  
 
ಘಟನೆಯ ಬಳಿಕ ಪರಿಶೀಲಿಸಿದ ಅಧಿಕಾರಿಗಳು ಪ್ರೇಕ್ಷಕರ ಗ್ಯಾಲರಿಯಲ್ಲಿ ಯಾರೋ ಧೂಮಪಾನ ಮಾಡಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಶಂಕಿಸಿದ್ದಾರೆ.   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

Show comments