Webdunia - Bharat's app for daily news and videos

Install App

ಮೈಸೂರಿನ ಬಳಿ ಕೊತ ಕೊತ ಕುದಿಯುತ್ತಿರುವ ಭೂಮಿ: ಬಾಲಕ ಬಲಿ

Webdunia
ಸೋಮವಾರ, 17 ಏಪ್ರಿಲ್ 2017 (10:22 IST)
ಮೈಸೂರು ಬಳಿಯ ಗ್ರಾಮವೊಂದರ ಭೂಮಿಯಲ್ಲಿ ಕೊತ ಕೊತ ಕುದಿಯುವ ಬೆಂಕಿ ಕಾಣಿಸಿಕೊಂಡು ಬಹಿರ್ದೆಸೆಗೆ ತೆರಳಿದ್ದ 15 ವರ್ಷದ ಬಾಲಕ ಹರ್ಷಲ್ ಎಂಬಾತ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದಾನೆ.

ಗ್ರಾಮದ ಸೋಮಣ್ಣ ಎಂಬುವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪರಿಸರ ತಜ್ಞರು ಭೇಟಿ ನೀಡಿ ಮಣ್ಣಿನ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಹಲವು ವರ್ಷಗಳಿಂದ ರಾಸಾಯನಿಕ ತ್ಯಾಜ್ಯವನ್ನ ಇಲ್ಲಿ ಸುರಿದಿದ್ದು, ರಾಸಾಯನಿಕ ತ್ಯಾಜ್ಯ ಮಣ್ಣಿನ ಜೊತೆ ಸೇರಿ ಬೆಂಕಿ ಉಗುಳುತ್ತಿದೆ.

ಕಳೆದ ಹಲವು ದಿನಗಳಿಂದಲೂ ಈ ಬೆಂಕಿಯ ಬಗ್ಗೆ ಗ್ರಾಮದ ಜನರ ಗಮನಕ್ಕೆ ಬಂದಿದೆ. ವಾರದ ಹಿಂದಷ್ಟೇ ವ್ಯಕ್ತಿಯೊಬ್ಬ ಈ ಬೆಂಕಿಯಿಂದ ಕಾಲು ಸುಟ್ಟುಕೊಂಡು ಆಸ್ಪತ್ರೆ ಸೇರಿದ್ದಾನೆ. ಹಸು, ಆಡುಗಳು ಸಹ ಈ ಬೆಂಕಿ ಕೆನ್ನಾಲಿಗಗೆ ಬಲಿಯಾಗಿವೆ ಎಂಬ ಮಾಹಿತಿ ಸಿಕ್ಕಿದೆ. ಸದ್ಯ, ಸ್ಥಳದಲ್ಲಿ 100 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುಮೋಟೋ ಕೇಸ್ ದಾಖಲಿಸಿಕೊಮಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments