Select Your Language

Notifications

webdunia
webdunia
webdunia
webdunia

ಮುಂಬೈನಿಂದ ಮೆಜೆಸ್ಟಿಕ್‍ಗೆ ಆಗಮಿಸಿದ್ದ ರೈಲಿನಲ್ಲಿ ಬೆಂಕಿ !

ಮುಂಬೈನಿಂದ ಮೆಜೆಸ್ಟಿಕ್‍ಗೆ ಆಗಮಿಸಿದ್ದ ರೈಲಿನಲ್ಲಿ ಬೆಂಕಿ !
ಬೆಂಗಳೂರು , ಶನಿವಾರ, 19 ಆಗಸ್ಟ್ 2023 (09:47 IST)
ಬೆಂಗಳೂರು : ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ  ನಿಂತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ರೈಲಿನ ಬಿ1 ಬಿ2 ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಎರಡು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಉದ್ಯಾನ್ ಎಕ್ಸ್ಪ್ರೆಸ್ ರೈಲು ಮುಂಜಾನೆ 6:30ಕ್ಕೆ ಮುಂಬೈನಿಂದ ಮೆಜೆಸ್ಟಿಕ್ನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದು ನಿಂತಿತ್ತು. ಈ ವೇಳೆ ಇಂಜಿನ್ನಿಂದ ಐದು ಬೋಗಿಗಳ ದೂರದಲ್ಲಿದ್ದ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಸ್ಥಳೀಯ ಪೊಲೀಸರು ಬೆಂಕಿ ನಂದಿಸಲಿಕ್ಕೆ ಪ್ರಯತ್ನ ಪಟ್ಟಿದ್ದಾರೆ. ಆದರೆ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ.

ಕೂಡಲೇ ಎರಡು ಅಗ್ನಿಶಾಮಕ ವಾಹನ ಕರೆಸಿಕೊಳ್ಳಲಾಯಿತು. ನಂತರ ಅಗ್ನಿಶಾಮಕ ಸಿಬ್ಬಂದಿ ಸತತ ಅರ್ಧ ಗಂಟೆ ಬೆಂಕಿ ನಂದಿಸಲು ಪ್ರಯತ್ನ ಪಟ್ಟರೂ 2 ಎಸಿ ಕೋಚ್ಗಳು ಸಂಪೂರ್ಣ ಸುಟ್ಟು ಹೋಗಿವೆ. ಬಳಿಕ ಸತತ ಪ್ರಯತ್ನದ ನಂತರ ಬೆಂಕಿಯನ್ನು ನಂದಿಸಲಾಗಿದೆ. ಬೆಂಕಿ ಸಂಪೂರ್ಣ ಹತೋಟಿಗೆ ಬಂದ ನಂತರ ಹಾನಿಗೊಳಗಾದ ಬೋಗಿಗಳನ್ನು ಬೇರೆಡೆ ಸ್ಥಳಾಂತರಿಸಲಾಗುತ್ತಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಖಾಸಗಿ ವೀಡಿಯೋ ಬಹಿರಂಗದ ಭೀತಿ : ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆಗೈದ!