Webdunia - Bharat's app for daily news and videos

Install App

ಬಂಡೀಪುರ ಅರಣ್ಯಕ್ಕೆ ಬೆಂಕಿ; ಉಸ್ತುವಾರಿ ಸಚಿವರಿಗೆ ಮಾಹಿತಿ ಕೊರತೆ?

Webdunia
ಮಂಗಳವಾರ, 26 ಫೆಬ್ರವರಿ 2019 (17:49 IST)
ಬಂಡೀಪುರ ಅಭಯಾರಣ್ಯಕ್ಕೆ ಬೆಂಕಿ ತಗುಲಿದ್ದು ಅಪಾರ ಪ್ರಮಾಣದ ಕಾಡು ನಾಶವಾಗಿದೆ. ಆದರೆ ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಹಿತಿ ಕೊರತೆ ಇರುವುದು ಎದ್ದು ಕಂಡಿದೆ.

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯಕ್ಕೆ ಬೆಂಕಿಬಿದ್ದು ಸಾವಿರಾರು ಎಕರೆ ಭಸ್ಮವಾದ ಹಿನ್ನೆಲೆಯಲ್ಲಿ ಭೇಟಿ ನೀಡಿದರು.  

ಬಂಡೀಪುರ ಅರಣ್ಯದಲ್ಲಿ ಸುಟ್ಟು ಕರಕಲಾಗಿರುವ ಭಾಗವನ್ನ ಪರಿಶೀಲನೆ ಮಾಡಿದ ಸಚಿವ ಪುಟ್ಟರಂಗಶೆಟ್ಟಿ, ಅರಣ್ಯದೊಳಗೆ ಸುಮಾರು 12 ಕಿ.ಮೀ ಒಳಗೆ ಪ್ರವೇಶ ಮಾಡಿ, ಪರಿಶೀಲನೆ ನಡೆಸಿದರು.

ಅರಣ್ಯದಲ್ಲಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸುತ್ತಿರುವವರನ್ನ  ಮಾತನಾಡಿಸಿದರು. ಸ್ವಯಂ ಸೇವಕರು, ಕಾಡು ಕುರುಬರು ಸೇರಿದಂತೆ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿರುವರ ಬಗ್ಗೆ ಮಾಹಿತಿ  ಪಡೆದುಕೊಂಡರು. ಅರಣ್ಯಕ್ಕೆ ಬೆಂಕಿ ಬಿದ್ದು ಆರು ದಿನಗಳೇ ಕಳೆದಿದ್ರೂ, ಸರಿಯಾದ ಮಾಹಿತಿ ಪಡೆಯದ ಸಚಿವ ಪುಟ್ಟರಂಗಶೆಟ್ಟಿ, ಮಾಧ್ಯಮದವರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲಿಲ್ಲ. ಎಷ್ಟು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ? ಕಾರಣ ಏನು? ಮುಂದೇನು ಮಾಡುವುದು? ಎಂಬೆಲ್ಲ ಪ್ರಶ್ನೆಗಳಿಗೆ ನಿಖರವಾದ ಮಾಹಿತಿ ನೀಡಲಿಲ್ಲ. ಉಸ್ತುವಾರಿ ಸಚಿವರಾದ ಮೇಲೆ  ಬಂಡೀಪುರಕ್ಕೆ ಒಮ್ಮೆಯೂ ಭೇಟಿ ನೀಡದ ಪುಟ್ಟರಂಗಶೆಟ್ಟಿ, ಇದೇ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments