ಚಲಿಸುತ್ತಿದ್ದ ಕಾರಿನಲ್ಲಿ ಹೊತ್ತಿ ಉರಿದ ಬೆಂಕಿ

Webdunia
ಮಂಗಳವಾರ, 28 ಸೆಪ್ಟಂಬರ್ 2021 (20:06 IST)
ಚಲಿಸುತ್ತಿದ್ದ ಕಾರೊಂದು ಬೆಂಕಿ ಹೊತ್ತಿ ನಡು ರಸ್ತೆ ದಗದಗಿಸಿದ ಘಟನೆ ಜ್ಞಾನಭಾರತೊ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನ ಚಾಲಕ ಜೀವ ಅಪಾಯದಿಂದ ಪಾರಾಗಿದ್ದಾನೆ. 
ಹೊಂಡಾ ಆಮೇಜ್ ಕಾರು ಬೆಂಕಿ ಹೊತ್ತಿಕೊಂಡು ಕರುಕಲಾಗಿದೆ. ಇದನ್ನು ಚಲಾಯಿಸುತ್ತಿದ್ದ ನಟರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೆÇಲೀಸರು ತಿಳಿಸಿದರು. 
ತಮ್ಮ ಸಂಬಂಧಿಕರನ್ನು ನೋಡಲು ನಟರಾಜ್ ತಮ್ಮ ಹೊಂಡಾ ಅಮೇಜ್ ಕಾರಿನಲ್ಲಿ ಹೊರಟಿದ್ದರು. ದೊಡ್ಡಬಸ್ತಿ ಮುಖ್ಯರಸ್ತೆಯಲ್ಲಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡು ಬೆಂಕಿ ಉರಿಯಲಾರಂಭಿಸಿತ್ತು. ಗಾಬರಿಗೊಂಡ ನಟರಾಜ್, ಕಾರನ್ನು ರಸ್ತೆಯಲ್ಲೇ ನಿಲ್ಲಿಸಿ ಇಳಿದಿದ್ದರು ಎಂದು ಹೇಳಿದರು.
ಸ್ಥಳಕ್ಕೆ ಹೋಗಿದ್ದ ಗಸ್ತು ಸಿಬ್ಬಂದಿ, ಕಾರಿನ ಬಳಿ ಸಾರ್ವಜನಿಕರ ಓಡಾಟವನ್ನು ನಿರ್ಬಂಧಿಸಿದ್ದರು. ನಾಗರಬಾವಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ತಗುಲಿದ್ದ ಬೆಂಕಿ ನಂದಿಸಿದರು. ಅಷ್ಟರಲ್ಲೇ ಕಾರು ಸಂಪೂರ್ಣ ಸುಟ್ಟಿ ಹೋಗಿತ್ತು ಎಂದು ತಿಳಿದುಬಂದಿದೆ. ಈ ಸಂಬಂಧ ಜ್ಞಾನಭಾರತಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಹಿದ್ದು ಕಾರಿಗೆ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಗೊತ್ತಾಗಿಲ್ಲ. ತನಿಖೆ ಮುಂದುವರಿದಿದೆ ಎಂದು ಪೆÇಲೀಸರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments