Webdunia - Bharat's app for daily news and videos

Install App

ಪಟಾಕಿ ಸಿಡಿದು 8 ಮಕ್ಕಳ ಕಣ್ಣಿಗೆ ಹಾನಿ

Webdunia
ಭಾನುವಾರ, 7 ನವೆಂಬರ್ 2021 (11:40 IST)
ಬೆಂಗಳೂರು : ನಗರದಲ್ಲಿ ನಡೆದ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿಸುವಾಗ ಎಂಟು ಮಂದಿ ಕಣ್ಣಿಗೆ ಹಾನಿ ಮಾಡಿಕೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಎರಡು, ನಾರಾಯಣ ನೇತ್ರಾಲಯದಲ್ಲಿ ನಾಲ್ಕು ಹಾಗೂ ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ ಒಂದು ಪ್ರಕರಣ ಗುರುವಾರ ಒಂದೇ ದಿನದಲ್ಲಿ ವರದಿಯಾಗಿವೆ. ಭಾನುವಾರವಷ್ಟೇ ಪಟಾಕಿ ಹಚ್ಚುತ್ತಿದ್ದುದನ್ನು ನೋಡುತ್ತಾ ನಿಂತಿದ್ದ 10 ವರ್ಷದ ಬಾಲಕನ ಕಣ್ಣುಗಳಿಗೆ ಕಿಡಿ ಹಾರಿ ಗಾಯವಾಗಿದೆ. ತಕ್ಷಣಕ್ಕೆ ಹತ್ತಿರದ ಕ್ಲಿನಿಕ್ನಲ್ಲಿ ಚಿಕಿತ್ಸೆ ಕೊಡಿಸಿ, ಗುರುವಾರ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಾಲಕ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ.
ದೊಡ್ಡಕಲ್ಲಸಂದ್ರದ 6 ವರ್ಷದ ಬಾಲಕ ಯುವರಾಜ್ ಫ್ಲವರ್ ಪಾಟ್ ಸಿಡಿಸುವಾಗ ಗಾಯಗೊಂಡಿದ್ದು, ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಾರಾಯಣ ನೇತ್ರಾಲಯದಲ್ಲಿ ಆರು ವರ್ಷದ ಬಾಲಕಿ, 8 ಮತ್ತು 11 ವರ್ಷದ ಇಬ್ಬರು ಬಾಲಕರು ಹಾಗೂ 40 ವರ್ಷದ ಪುರುಷನೊಬ್ಬ ಚಿಕಿತ್ಸೆ ಪಡೆದಿದ್ದಾರೆ. ಅದೃಷ್ಟವಶಾತ್ ಯಾರಿಗೂ ದೊಡ್ಡ ಸಮಸ್ಯೆಯಾಗಿಲ್ಲ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ. ಭುಜಂಗ ಶೆಟ್ಟಿ ತಿಳಿಸಿದ್ದಾರೆ. ಬನಶಂಕರಿಯ 13 ವರ್ಷದ ಬಾಲಕನೊಬ್ಬ ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತು ತೆರಳುತ್ತಿರುವಾಗ ಪಟಾಕಿಯ ಕಿಡಿಯೊಂದು ಕಣ್ಣಿಗೆ ಬಡಿದಿದೆ. ಕೂಡಲೇ ಬಾಲಕನನ್ನು ಚಿಕ್ಕಕಲ್ಲಸಂದ್ರದ ಡಾ. ಅಗರ್ವಾಲ್ ಕಣ್ಣಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಲಕ ಅಪಾಯದಿಂದ ಪಾರಾಗಿದ್ದಾನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments