ಪಟಾಕಿ ಗೋದಾಮು ದುರಂತ ಸೂಕ್ತ ತನಿಖೆಯಾಗಲಿ : ಬಸವರಾಜ ಬೊಮ್ಮಾಯಿ

Webdunia
ಗುರುವಾರ, 31 ಆಗಸ್ಟ್ 2023 (12:34 IST)
ಹಾವೇರಿ : ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಃಖದ ಸಂಗತಿಯಾಗಿದೆ.
 
ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಈ ರೀತಿಯ ಅಪಾಯಕಾರಿ ಸ್ಥಳಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಹಾವೇರಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಈ ರೀತಿಯ ಪಟಾಕಿ ಸಿಡಿಮದ್ದು ದಾಸ್ತಾನು ಕೇಂದ್ರಗಳ ಕುರಿತು ಪರಿಶೀಲನೆ ನಡೆಸಿ ಕಾರ್ಮಿಕರಿಗೆ ಸೂಕ್ತ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬೆಂಕಿ ಅವಘಡದಲ್ಲಿ ಸಜೀವ ದಹನವಾಗಿರುವ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣ ಸೂಕ್ತ ಪರಿಹಾರ ನೀಡಬೇಕು. ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments