Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರಿನಲ್ಲಿ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
ಬೆಂಗಳೂರು , ಬುಧವಾರ, 3 ಜೂನ್ 2020 (08:33 IST)
ಬೆಂಗಳೂರು : ಬೆಂಗಳೂರಿನ ಬಾಗಲೂರು ಬಳಿ ಆರೋಪಿಯೊಬ್ಬನ  ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಫೈರಿಂಗ್ ಮಾಡಿದ್ದಾರೆ.


ಆರೋಪಿ ಮುನಿಕೃಷ್ಣ ಅಲಿಯಾಸ್ ಕಪ್ಪೆ ಮೇಲೆ ಫೈರಿಂಗ್ ಮಾಡಲಾಗಿದೆ, ಮದ್ಯ ನೀಡಿಲ್ಲವೆಂದು ಗೆಳೆಯನಿಗೆ ಚಾಕು ಇರಿದಿದ್ದ ಈ ಆರೋಪಿ ಕೊಲೆ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.


ಬಾಗಲೂರಿನಲ್ಲಿಂದು ಆರೋಪಿ ಮುನಿಕೃಷ್ಣ ಕಾಣಿಸಿಕೊಂಡಿದ್ದ ಹಿನ್ನಲೆಯಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದ  ಇನ್ಸ್ ಪೆಕ್ಟರ್ ಶರಣಾಗುವಂತೆ ಸೂಚಿಸಿದರೂ ಕೇಳದ ಹಿನ್ನಲೆಯಲ್ಲಿ ಮುನಿಕೃಷ್ಣ ಕಾಲಿಗೆ ಗುಂಡು ಹಾರಿಸಿದ್ದಾರೆ. ಈ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಗೆ ಗಾಯವಾಗಿದ್ದು, ಗಾಯಾಳುಗಳಿಗೆ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಅನೈತಿಕ ಸಂಬಂಧ ತಿಳಿದ ಮಗನನ್ನೇ ಕೊಂದ ತಾಯಿ