Webdunia - Bharat's app for daily news and videos

Install App

ಕಳ್ಳರ ಗ್ಯಾಂಗ್ ನಾಯಕನ ಮೇಲೆ ಫೈರಿಂಗ್

Webdunia
ಗುರುವಾರ, 13 ಡಿಸೆಂಬರ್ 2018 (19:25 IST)
ಆತ ಅಪ್ರಾಪ್ತ ಬಾಲಕರನ್ನೊಳಗೊಂಡ ಗ್ಯಾಂಗ್ ಕಟ್ಟಿಕೊಂಡಿದ್ದನು. ಮಾಡಬಾರದ ಕೆಲಸ ಮಾಡುತ್ತಿದ್ದವನ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ.

 50ಕ್ಕೂ ಹೆಚ್ಚು ಕಡೆಗಳಲ್ಲಿ ಕಳ್ಳತನ ಮಾಡಿ ಕ್ಯಾಬ್ ಚಾಲಕನೊಬ್ಬನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ಕಳ್ಳ ಮುರಳಿ ಅಲಿಯಾಸ್ ಮುರಳೀಧರ್ಗೆ ಬೈಯಪ್ಪನಹಳ್ಳಿ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.

ಪೊಲೀಸರ ಗುಂಡೇಟು ತಗುಲಿ ಎಡಗಾಲಿಗೆ ಗಾಯಗೊಂಡಿರುವ ಜೋಗುಪಾಳ್ಯದ ಮುರಳಿ (25) ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ಗ್ಯಾಂಗ್ನಲ್ಲಿ ಕಳವು ಕೃತ್ಯದಲ್ಲಿ ತೊಡಗಿದ್ದ ಜೋಗುಪಾಳ್ಯದ ಪೀಟರ್ (25)ನನ್ನು ಬಂಧಿಸಿ ಇಬ್ಬರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗಿದೆ ಪೊಲೀಸರು ತಿಳಿಸಿದ್ದಾರೆ.

ಬಂಧಿಸಲು ಹೋದಾಗ ಮುರಳೀಧರ್ ಚಾಕುವಿನಿಂದ ಹಲ್ಲೆ ಮಾಡಿದ್ದರಿಂದ ಗಾಯಗೊಂಡಿರುವ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ಮುಖ್ಯಪೇದೆ ವಿಜಯ್ಕುಮಾರ್ ಕೈಗೆ ಗಾಯಗೊಂಡಿದ್ದಾರೆ. ಅವರನ್ನು ಅಭಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments