Select Your Language

Notifications

webdunia
webdunia
webdunia
webdunia

ಇಬ್ಬರು ಆರೋಪಿಗಳ ಮೇಲೆ ಫೈರಿಂಗ್​​​

ಇಬ್ಬರು ಆರೋಪಿಗಳ ಮೇಲೆ ಫೈರಿಂಗ್​​​
bangalore , ಮಂಗಳವಾರ, 24 ಅಕ್ಟೋಬರ್ 2023 (15:20 IST)
ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಾದ ವೇಣುಗೋಪಾಲ್, ಮನೀಂದ್ರ ಕಾಲಿಗೆ ವೇಮಗಲ್ ಠಾಣೆ ಇನ್ಸ್​ಪೆಕ್ಟರ್​ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ. ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಸಂತೋಷ್​ಗೂ ಗಾಯವಾಗಿದೆ. ಬಂಧಿಸಿ ಕರೆತರುವ ವೇಳೆ ಆರೋಪಿಗಳು ಪೊಲೀಸ್ ಸಿಬ್ಬಂದಿಯಾದ ಮಂಜುನಾಥ್ ಮತ್ತು ನಾಗೇಶ್​ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಇನ್ಸ್​ಪೆಕ್ಟರ್​ ವೆಂಕಟೇಶ್ ಫೈರಿಂಗ್ ಮಾಡಿದ್ದಾರೆ. ​ಗಾಯಗೊಂಡ ಪೊಲೀಸ್ ಸಿಬ್ಬಂದಿ, ಆರೋಪಿಗಳಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಆರು ಆರೋಪಿಗಳ ಪೈಕಿ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಮೂರು ಜನರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

25 ಲಕ್ಷ ಮೌಲ್ಯದ ಗಾಂಜಾ ಗಿಡಗಳು ಜಪ್ತಿ- ಒಬ್ಬನ ಬಂಧನ