ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ

Webdunia
ಶುಕ್ರವಾರ, 23 ಜೂನ್ 2023 (13:13 IST)
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮಕ್ಕೆ ಕೌಂಟ್ಡೌನ್ ಶುರುವಾಗಿದೆ. ಬೆಟ್ಟಕ್ಕೆ ಪ್ರತಿ ಆಷಾಢ ಶುಕ್ರವಾರದಂದು ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ.
 
ಅಂತೆಯೇ ಈ ಬಾರಿಯೂ ಖಾಸಗಿ ಬಸ್ಗಳಿಗೆ ನಿರ್ಬಂಧ ವಿಧಿಸಿದ್ದು, ಸರ್ಕಾರಿ ಬಸ್ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಆಷಾಢ ಪೂಜಾ ಕೈಂಕರ್ಯಗಳಿಗೆ ಸಿದ್ಧತೆ ಜೋರಾಗಿದೆ.

ಆಷಾಢ ಶುಕ್ರವಾರ ಬಂದ್ರೆ ಸಾಕು ಅರಮನೆ ನಗರಿ ಮೈಸೂರು ಹಾಗೂ ಚಾಮುಂಡಿ ಭಕ್ತರಿಗೆ ಸಂಭ್ರಮವೋ ಸಂಭ್ರಮ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ನಾಳೆ ನಾಡದೇವತೆ, ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.

ನಾಳೆ ಮುಂಜಾನೆ 3 ಗಂಟೆ 30 ನಿಮಿಷಕ್ಕೆ ಅಭಿಷೇಕದೊಂದಿಗೆ ಆರಂಭವಾಗುವ ವಿವಿಧ ರೀತಿಯ ಪೂಜಾ ಕೈಂಕರ್ಯ ಎರಡು ಗಂಟೆಗಳ ಕಾಲ ನಿರಂತರವಾಗಿ ನಡೆಯಲಿವೆ. ನಾಳೆ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಿ ಬಳಿಕ 5 ಗಂಟೆ 30 ನಿಮಿಷಕ್ಕೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ. 

 
ಆಷಾಢ ಶುಕ್ರವಾರದ ಪೂಜೆಗೆ ಚಾಮುಂಡಿಬೆಟ್ಟದಲ್ಲಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕಿರಿದಾದ ಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಬಾರದೆಂದು ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments