ಪಾದಯಾತ್ರೆಗೆ ಸಿಕ್ಕಿದ ಮೊದಲ ಜಯ: ಗೋವಿಂದ ಕಾರಜೋಳ

Sampriya
ಮಂಗಳವಾರ, 1 ಅಕ್ಟೋಬರ್ 2024 (19:52 IST)
Photo Courtesy X
ಬೆಂಗಳೂರು: ಮುಡಾ ಹಗರಣವನ್ನು ಕೈಗೆತ್ತಿಕೊಂಡು ನಮ್ಮ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳಿದ ಪಾದಯಾತ್ರೆಗೆ ಸಿಕ್ಕಿದ ಮೊದಲ ಜಯ ಇದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅಭಿಪ್ರಾಯಪಟ್ಟರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು 40 ವರ್ಷಗಳ ರಾಜಕಾರಣದಲ್ಲಿ ನಾನೊಬ್ಬ ಪ್ರಾಮಾಣಿಕ, ನನಗೆ ಯಾವುದೇ ಕಪ್ಪು ಚುಕ್ಕಿ ಇಲ್ಲ ಎಂದು ಅವರಷ್ಟಕ್ಕೇ ಅವರು ಬಡಾಯಿ ಕೊಚ್ಚಿಕೊಳ್ಳುತ್ತಿದ್ದರು. ಪಾರದರ್ಶಕ ಆಡಳಿತ ಮಾಡಿದ್ದಾಗಿ ಹೇಳಿಕೊಳ್ಳುತ್ತಿದ್ದರು ಎಂದು ಟೀಕಿಸಿದರು.

ಪಾರದರ್ಶಕಕ್ಕಿಂತ ಪ್ರಾಮಾಣಿಕ ಆಡಳಿತ ಬಹಳ ಮುಖ್ಯ. ಪ್ರಾಮಾಣಿಕ ಆಡಳಿತದ ವಿಚಾರದಲ್ಲಿ ಸಿದ್ದರಾಮಯ್ಯನವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು. 120 ವರ್ಷಗಳ ಹಳೆಯದಾದ ಕಾಂಗ್ರೆಸ್ ಪಾರ್ಟಿಯ ಮಾನ, ಮರ್ಯಾದೆ ಹಾದಿಬೀದಿಯಲ್ಲಿ ಹರಾಜಾಗುತ್ತಿದೆ. ಅದಕ್ಕೆ ಸಿದ್ದರಾಮಯ್ಯನವರು ಕಾರಣ ಎಂದು ಆಕ್ಷೇಪಿಸಿದರು.

ಸಿದ್ದರಾಮಯ್ಯನವರು ಪ್ರಾಮಾಣಿಕರಾಗಿದ್ದರೆ ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರು ಅಧಿಕಾರಕ್ಕೆ ಅಂಟಿಕೊಂಡು ಭಂಡತನ ಪ್ರದರ್ಶನ ಮಾಡಿದ್ದಾರೆ ಎಂದು ಟೀಕಿಸಿದರು. ಸ್ವಾತಂತ್ರ್ಯ ಬಂದ ಬಳಿಕ 75 ವರ್ಷಗಳ ದೇಶದ ಇತಿಹಾಸದಲ್ಲಿ ಈ ರೀತಿ ಗೌರವಾನ್ವಿತ ರಾಜ್ಯಪಾಲರ ಮೇಲೆ ಆಪಾದನೆ ಮಾಡಿದ ಯಾವ ಮುಖ್ಯಮಂತ್ರಿಯೂ ಇಲ್ಲ ಎಂದು ನುಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments