Select Your Language

Notifications

webdunia
webdunia
webdunia
webdunia

ಐವರು ಆತ್ಮಹತ್ಯೆ; ಚುರುಕುಗೊಂಡ ತನಿಖೆ

ಐವರು ಆತ್ಮಹತ್ಯೆ; ಚುರುಕುಗೊಂಡ ತನಿಖೆ
ತುಮಕೂರು , ಸೋಮವಾರ, 27 ನವೆಂಬರ್ 2023 (19:23 IST)
ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ದಂಪತಿಯೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

ಪತಿ ಗರೀಬ್ ಸಾಬ್, ಪತ್ನಿ ಸುಮಯ್ಯ, ಮಗಳು ಹಜೀನಾ, ಗಂಡು ಮಕ್ಕಳಾದ ಮೊಹ್ಮದ್ ಶಬೀರ್​, ಮೊಹಮದ್ ಮುನೀರ್ ಮೃತರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಎರಡು ಪುಟಗಳ ಡೆತ್‌ನೋಟ್​ನಲ್ಲಿ ಉಲ್ಲೇಖಿಸಲಾಗಿದೆ. ಹಾಗೇ ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದು, ಆ ವಿಡಿಯೋದಲ್ಲಿ ಐವರ ಹೆಸರಗಳನ್ನು ಹೇಳಿದ್ದಾರೆ. ಇದೀಗ ಪೊಲೀಸರು ಆ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತೆಂಗಿನಕಾಯಿ ಕೀಳುವಾಗ ವಿದ್ಯುತ್​ ತಗುಲಿ ವ್ಯಕ್ತಿ ಸಾವು