Webdunia - Bharat's app for daily news and videos

Install App

ಕೆ ಆರ್ ಎಸ್ ಸುತ್ತ ಐದು ದಿನ ಟ್ರಯಲ್‌ ಬ್ಲಾಸ್ಟ್: ಏನಿದು ಗೊತ್ತಾ?

Webdunia
ಗುರುವಾರ, 24 ಜನವರಿ 2019 (19:15 IST)
ಕೆಆರ್‌ಎಸ್ ಸುತ್ತಮುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಐದು ದಿನ ಟ್ರಯಲ್ ಬ್ಲಾಸ್ಟ್‌ಗೆ ಷರತ್ತು ವಿಧಿಸಿ ಅನುಮತಿ ನೀಡಲಾಗಿದೆ ಎನ್ನಲಾಗಿದೆ.

ಮಂಡ್ಯ  ಜಿಲ್ಲೆಯ  ಕೆಆರ್‌ಎಸ್ ಸುತ್ತಮುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಸ್ಫೋಟದಿಂದ ಡ್ಯಾಂಗೆ ಅಪಾಯವಾಗುತ್ತೆಂಬ ವರದಿ ಬಂದಿವೆ. ಈ ಹಿನ್ನೆಲೆ ಜ.24ರಿಂದ ಐದು ದಿನ ಪುಣೆ ವಿಜ್ಞಾನಿಗಳ ತಂಡ ಸ್ಥಳ ಪರಿಶೀಲನೆ ಮಾಡಲಿದ್ದು, ಈ ಹಿನ್ನೆಲೆ ಐದು ದಿನ ಟ್ರಯಲ್ ಬ್ಲಾಸ್ಟ್‌ಗೆ ಷರತ್ತು ವಿಧಿಸಿ ಡಿಸಿ ಎನ್.ಮಂಜುಶ್ರೀ ಅನುಮತಿ ನೀಡಿದ್ದಾರೆ.

2018 ನ.13ರಂದು ಭೂ ಮಾಪನ ಕೇಂದ್ರದಲ್ಲಿ ಸ್ಫೋಟಕ ಶಬ್ದ ದಾಖಲಾಗಿತ್ತು. ಆದ್ದರಿಂದ ಮುಂದಾಗಬಹುದಾದ ಧೀರ್ಘಕಾಲಿನ ಪರಿಣಾಮ ಕುರಿತು ಅಧ್ಯಯನ ನಡೆಸಿ ತಾಂತ್ರಿಕ ವರದಿ ನೀಡುವಂತೆ ಪುಣೆ ಸಿಡಬ್ಲ್ಯೂಪಿಆರ್‌ಎಸ್ ನಿರ್ದೇಶಕರಿಗೆ ಮೈಸೂರು ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಪತ್ರ ಬರೆದಿದ್ದರು. ಈ ಹಿನ್ನೆಲೆ ವಿಜ್ಞಾನಿಗಳ ತಂಡ ಆಗಮಿಸಲಿದೆ.

ಪರಿಶೀಲನೆ ನಡೆದಿತ್ತು: ಕಾವೇರಿ ನೀರಾವರಿ ನಿಗಮದ ಪತ್ರದಂತೆ ಈಗಾಗಲೇ ಅಂದರೆ 2018 ಡಿ.6 ರಿಂದ 18ರವರೆಗೆ ಪುಣೆ ಸಿಡಬ್ಲ್ಯೂಪಿಆರ್‌ಎಸ್ ತಂಡ ಕೆಆರ್‌ಎಸ್ ಸುತ್ತ ಪರಿಶೀಲನೆ ನಡೆಸಿತ್ತು. ಆದರೆ ಹೆಚ್ಚುವರಿ ಅಧ್ಯಯನದ ಅವಶ್ಯಕತೆ ಇದೆ ಎಂದು ವರದಿ ನೀಡಿದ್ದರು.

ಈ ಹಿನ್ನೆಲೆ ಜ.24ರಿಂದ ಮತ್ತೆ ಪರಿಶೀಲನೆ ನಡೆಯಲಿದ್ದು, ನಿಗಮದ ಪರವಾನಗಿ ಹೊಂದಿರುವ ಬ್ಲಾಸ್ಟಿಂಗ್ ಗುತ್ತಿಗೆದಾರರಿಂದ ಉತ್ತರ ದಂಡೆಯ ಕಡೆ ಇರುವ ಎಲ್ಲ ಕಲ್ಲು ಗಣಿಗಾರಿಕಾ ಕೇಂದ್ರದಲ್ಲಿ ಟ್ರಯಲ್ ಬ್ಲಾಸ್ಟಿಂಗ್‌ಗೆ ಅನುಮತಿ ನೀಡುವಂತೆ ನಿಗಮದ ಅಧಿಕಾರಿಗಳು ಡಿಸಿಗೆ ಪತ್ರ ಬರೆದಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments