Webdunia - Bharat's app for daily news and videos

Install App

ಪಂಚರಾಜ್ಯ ಚುನಾವಣೆ: ಜನವರಿ 22 ವರೆಗೆ ರ್‍ಯಾಲಿ ಮತ್ತು ರೋಡ್‌ಶೋಗಳು ನಿಷೇಧ

Webdunia
ಭಾನುವಾರ, 16 ಜನವರಿ 2022 (20:40 IST)
ಕೊರೊನಾ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗುತ್ತಿದ್ದಂತೆ ಐದು ರಾಜ್ಯಗಳಲ್ಲಿ ಚುನಾವಣೆಗೆ ಮುಂಚಿತವಾಗಿ ನಡೆಯುವ ರ್‍ಯಾಲಿಗಳು ಮತ್ತು ರೋಡ್‌ಶೋಗಳ ಮೇಲೆ ನಿಷೇಧ ಹೇರಲಾಗಿತ್ತು. ಇದೀಗ ಈ ನಿಷೇಧವನ್ನು ಜನವರಿ 22 ರವರೆಗೆ ವಿಸ್ತರಿಸಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.
ಒಳಾಂಗಣ ರಾಜಕೀಯ ಸಭೆಗಳು, 300 ಜನರ ಮಿತಿಗೆ ಒಳಪಟ್ಟು, ಸಭಾಂಗಣದ ಸಾಮರ್ಥ್ಯದ 50% ಅಥವಾ ರಾಜ್ಯದ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಿಗದಿಪಡಿಸಿದ ಮಿತಿಗೆ ಒಳಪಟ್ಟು ನಡೆಸಬಹುದಾಗಿದೆ.
ಜನವರಿ 8 ರಂದು ಚುನಾವಣಾ ಆಯೋಗವು ರ್‍ಯಾಲಿಗಳು, ರೋಡ್‌ಶೋಗಳು ಮತ್ತು ಇತರ ರೀತಿಯ ಸಾರ್ವಜನಿಕ ರಾಜಕೀಯ ಕಾರ್ಯಕ್ರಮಗಳನ್ನು ಜನವರಿ 15 (ಇಂದು) ವರೆಗೆ ನಿಷೇಧಿಸಲಾಗುವುದು ಮತ್ತು ನಂತರ ಈ ಆದೇಶವನ್ನು ಪರಿಶೀಲಿಸಲಾಗುವುದು ಎಂದು ಹೇಳಿತ್ತು.
ಚುನಾವಣಾ ಆಯೋಗವು ಇಂದು 11 ಗಂಟೆಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿಗಳೊಂದಿಗೆ, ಮಧ್ಯಾಹ್ನ 1 ಗಂಟೆಗೆ ಚುನಾವಣೆಗೆ ಒಳಪಟ್ಟ ಎಲ್ಲಾ ರಾಜ್ಯಗಳ ಮುಖ್ಯ ಮತ್ತು ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಮತ್ತು ಮಧ್ಯಾಹ್ನ 1 ಗಂಟೆಗೆ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿತ್ತು.
ಒಕ್ಕೂಟ ಸರ್ಕಾರ, ರಾಜ್ಯ ಸರ್ಕಾರಗಳು, ಆರೋಗ್ಯ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಅಭಿಪ್ರಾಯಗಳನ್ನು ಪಡೆದ ನಂತರ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.
ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲಿ ಸಾಧ್ಯವಾದಷ್ಟು ಸುರಕ್ಷಿತವಾಗಿ ಚುನಾವಣೆಗಳನ್ನು ನಡೆಸುವ ಗುರಿಯನ್ನು ಹೊಂದಿರುವ ಕ್ರಮಗಳ ಭಾಗವಾಗಿ ರ್‍ಯಾಲಿಗಳು ಮತ್ತು ರೋಡ್‌ಶೋಗಳನ್ನು ನಿಷೇಧಿಸುವ ಆದೇಶವನ್ನು ಅಂಗೀಕರಿಸಲಾಗಿದೆ.
“ಅಭ್ಯರ್ಥಿಗಳು ಸಾಧ್ಯವಾದಷ್ಟು ಆನ್‌ಲೈನ್‌‌ ಮೂಲಕ ಪ್ರಚಾರ ನಡೆಸಬೇಕು… ಸಾರ್ವಜನಿಕ ರಸ್ತೆಗಳಲ್ಲಿ ಸಭೆಗಳು ಇರುವುದಿಲ್ಲ ಮತ್ತು ಮತ ಎಣಿಕೆಯ ನಂತರ ವಿಜಯೋತ್ಸವದ ಮೆರವಣಿಗೆ ಇರುವುದಿಲ್ಲ” ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಕಳೆದ ವಾರ ಹೇಳಿದ್ದರು.
ಯುಪಿ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ್‌ಗಳಲ್ಲಿ ಚುನಾವಣೆಗಳು ನಡೆಯುತ್ತಿದ್ದು, ದೇಶದಾದ್ಯಂತ ಕೋವಿಡ್ ಪ್ರಕರಣಗಳ ಹೆಚ್ಚಳದ ನಡುವೆಯೇ ಚುನಾವಣೆಗಳು ನಡೆಯುತ್ತಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments