Select Your Language

Notifications

webdunia
webdunia
webdunia
webdunia

ನಗರದ ಹೊರವಲಯದ ಮನೆಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ

ನಗರದ ಹೊರವಲಯದ ಮನೆಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ
bangalore , ಶುಕ್ರವಾರ, 17 ಸೆಪ್ಟಂಬರ್ 2021 (21:00 IST)
ಬೆಂಗಳೂರು: ನಗರದ ಹೊರವಲಯದ ಮನೆಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರ ಪಾಳ್ಯದಲ್ಲಿ ನಡೆದಿದೆ.
ಬ್ಯಾಡರಹಳ್ಳಿಯ ಚೇತನ್ ಸರ್ಕಲ್ 4ನೇ ಕ್ರಾಸ್​ನಲ್ಲಿರುವ ಮನೆಯಲ್ಲಿ ಶಂಕರ್ ಎಂಬುವವರ ಕುಟುಂಬಸ್ಥರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರುವ ಅನುಮಾನವಿದೆ.
ಮನೆಯಲ್ಲಿ ಪ್ರತಿದಿನ ಗಲಾಟೆ ನಡೆಯುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಶಂಕರ್, ಪತ್ನಿ, ಓರ್ವ ಮಗ, ಇಬ್ಬರು ಹೆಣ್ಣುಮಕ್ಕಳು ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ. 9 ತಿಂಗಳ ಮಗುವನ್ನು ಮೊದಲು ಸಾಯಿಸಿ ಬಳಿಕ ಇಡೀ ಕುಟುಂಬ ಸಾವಿಗೆ ಶರಣಾಗಿದೆ ‌ಎಂದು ತಿಳಿದುಬಂದಿದೆ.
ಐದು ದಿನದ ಹಿಂದೆಯೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ದೊರತಿದೆ. ಶಂಕರ್​ ಅವರ ಪತ್ನಿ ಭಾರತಿ (50), ಇಬ್ಬರು ಪುತ್ರಿಯರಾದ ಸಿಂಚನ (33), ಸಿಂಧುರಾಣಿ (30), ಮಗ ಮಧು ಸಾಗರ (27) ಹಾಗೂ 9 ತಿಂಗಳ ಮಗುವಿನ ಮೃತದೇಹಗಳು ಪತ್ತೆಯಾಗಿವೆ.
ಮನೆಯಲ್ಲಿ ಒಟ್ಟು 6 ಮಂದಿ ಇದ್ದರು. ಇವರಲ್ಲಿ 5 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, 3 ವರ್ಷದ ಒಂದು ಮಗು ಮಾತ್ರ ಬದುಕುಳಿದಿದೆ. 5 ದಿನಗಳಿಂದ ಆಹಾರವಿಲ್ಲದೆ ನಿತ್ರಾಣವಾಗಿದ್ದ ಮಗುವನ್ನ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
sucide

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು