Webdunia - Bharat's app for daily news and videos

Install App

ಪಂಚತಾರಾ ಹೋಟೆಲ್‌ ರೂಮ್ ಬಾಡಿಗೆ ದರ 2 ಲಕ್ಷಕ್ಕೆ!

Webdunia
ಶನಿವಾರ, 18 ನವೆಂಬರ್ 2023 (17:46 IST)
ಭಾನುವಾರ ಇಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಲು ಅಭಿಮಾನಿಗಳ ದಂಡೇ ನಗರಕ್ಕೆ ಆಗಮಿಸುತ್ತಿದ್ದು, ಹೋಟೆಲ್ ರೂಮ್‌ಗಳು ಹಾಗೂ ವಿಮಾನದ ಟಿಕೆಟ್ ದರ ಗಗನಕ್ಕೆ ಮುಟ್ಟಿದೆ. ವಿಶ್ವಕಪ್ ಫೈನಲ್‌ ನ ಜ್ವರವು ಉತ್ತುಂಗಕ್ಕೆ ತಲುಪಿದ್ದು, ನಗರದ ಪ್ರಮುಖ ಪಂಚತಾರಾ ಹೋಟೆಲ್‌ಗಳಲ್ಲಿ ಪಂದ್ಯದ ರಾತ್ರಿಯ ಹೋಟೆಲ್ ರೂಮ್ ಬಾಡಿಗೆ ದರಗಳು 12 ಲಕ್ಷಕ್ಕೆ ಮುಟ್ಟಿವೆ. ಇತರ ಹೋಟೆಲ್‌ಗಳು ಸಹ ದರಗಳನ್ನು ಐದರಿಂದ ಏಳು ಪಟ್ಟು ಹೆಚ್ಚಿಸಿವೆ. ವಿಶ್ವಕಪ್ ಫೈನಲ್‌ಗೆ ಭಾರತದಿಂದ ಮಾತ್ರವಲ್ಲದೆ ದುಬೈ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ ವಿದೇಶಗಳಿಂದಲೂ ಜನರು ಬರುತ್ತಿದ್ದಾರೆ ಎಂದು ಗುಜರಾತ್‌ ನ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘದ ಅಧ್ಯಕ್ಷ ನರೇಂದ್ರ ಸೋಮಾನಿ ಹೇಳಿದ್ದಾರೆ.

ಅಹಮದಾಬಾದ್‌ನ ಸ್ಟಾರ್ ಮತ್ತು ಪಂಚತಾರಾ ಹೋಟೆಲ್‌ಗಳಲ್ಲಿ 5,000 ಕೊಠಡಿಗಳಿವೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 1.20 ಲಕ್ಷಕ್ಕೂ ಹೆಚ್ಚು ಅಸನಗಳ ಸಾಮರ್ಥ್ಯವಿದ್ದು, 30,000ರಿಂದ 40,000 ಜನರು ವಿದೇಶಗಳಿಂದ ಬರುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದೂ ಅವರು ಹೇಳಿದ್ದಾರೆ.ಹೋಟೆಲ್‌ ಕೊಠಡಿಗಳಿಗೆ ಬೇಡಿಕೆ ಹೆಚ್ಚಿರುವುದರಿಂದ ಅವುಗಳ ದರವೂ ಹೆಚ್ಚುತ್ತಿದೆ ಎಂದ ಅವರು, ಈ ಹಿಂದೆ ಅತ್ಯಲ್ಪ ದರದಲ್ಲಿ ಲಭ್ಯವಿದ್ದ ಕೊಠಡಿಗಳ ದರವೂ 750,000ದಿಂದ 71.25ಲಕ್ಷಕ್ಕೆ ಏರಿಕೆಯಾಗಿದೆ. ಅಹಮದಾಬಾದ್‌ನಲ್ಲಿ ಮಾತ್ರವಲ್ಲದೆ ಸುತ್ತಮುತ್ತಲಿನ ಪಟ್ಟಣಗಳಲ್ಲಿಯೂ ಪಂದ್ಯದ ದಿನ ಹತ್ತಿರ ಬರುತ್ತಿದ್ದಂತೆ ಹೋಟೆಲ್ ರೂಮ್ ಬಾಡಿಗೆ ಬೆಲೆಗಳು ಹೆಚ್ಚಾಗಿವೆ ಎಂದೂ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

ಮುಂದಿನ ಸುದ್ದಿ
Show comments