Webdunia - Bharat's app for daily news and videos

Install App

ಅಕ್ಟೋಬರ್ ನಲ್ಲಿ ವಿಮಾನ ಹಾರಾಟ ಪ್ರಾರಂಭ: ಖರ್ಗೆ

Webdunia
ಶನಿವಾರ, 14 ಜುಲೈ 2018 (17:56 IST)
ಕಲಬುರಗಿ ವಿಮಾನ ನಿಲ್ದಾಣದ ಸಂಪೂರ್ಣ ಕಾಮಗಾರಿಯನ್ನು ಇದೇ ಅಕ್ಟೋಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಿ ವಿಮಾನ ಹಾರಾಟ ಪ್ರಾರಂಭಗೊಳಿಸಲಾಗುವುದು ಎಂದು ಅಧಿಕಾರಿಗಳು ವಾಗ್ದಾನ ಮಾಡಿದ್ದಾರೆ. ಅದರಂತೆ ನಡೆದುಕೊಳ್ಳುಬೇಕು ಎಂದು ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಅವರು ಶನಿವಾರ ಶ್ರೀನಿವಾಸ ಸರಡಗಿ ಹತ್ತಿರ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಯನ್ನು ಪರಿಶೀಲಿಸಿ ಪತ್ರಕರ್ತರೊಂದಿಗೆ ಮಾತನಾಡಿ, ವಿಮಾನ ನಿಲ್ದಾಣದ ಎಲ್ಲ ಕಟ್ಟಡ ಕಾಮಗಾರಿಗಳು ಹಾಗೂ ರನ್ ವೇ ನಿರ್ಮಾಣ ಪೂರ್ಣಗೊಂಡಿದೆ. ಕೇವಲ ವಿದ್ಯುತ್ ಕಾಮಗಾರಿ ಮಾತ್ರ ಬಾಕಿ ಇದೆ. ಈಗಾಗಲೇ ಒಟ್ಟು 96.90 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.

ಸಧ್ಯ ವಿಮಾನ ನಿಲ್ದಾಣದಲ್ಲಿರುವ ಸವಲತ್ತುಗಳಿಂದ ಹಗಲು ಹೊತ್ತು ವಿಮಾನ ಸಂಚಾರ ಪ್ರಾರಂಭಿಸಬಹುದಾಗಿದೆ. ರಾತ್ರಿ ಹೊತ್ತು ವಿಮಾನ ಸೇವೆ ಪ್ರಾರಂಭಿಸಲು ವಿದ್ಯುತ್ ವ್ಯವಸ್ಥೆ ಕಡ್ಡಾಯವಾಗಿ ಅವಶ್ಯಕವಿರುವ ಕಾರಣ ವಿದ್ಯುತ್ ಕಾಮಗಾರಿಯನ್ನು ಪೂರ್ಣಗೊಳಿಸಿದ ನಂತರ ವಿಮಾನ ಸಂಚಾರ ಪ್ರಾರಂಭಿಸುವುದು ಸೂಕ್ತ ಎಂದು ಅಭಿಪ್ರಾಯ ಪಟ್ಟ ಅವರು ವಿದ್ಯುತ್ ಕಾಮಗಾರಿ ಸೇರಿದಂತೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಒಟ್ಟು 78 ಕೋಟಿ ರೂ.ಗಳ ಅವಶ್ಯಕತೆಯಿದ್ದು, ಈ ಬಾರಿಯ ಆಯವ್ಯಯದಲ್ಲಿ 65 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಹೆಚ್ಚಿನ ಹಣ ಬೇಕಾದಲ್ಲಿ ಹೆಚ್.ಕೆ.ಆರ್.ಡಿ.ಬಿ.ಯಿಂದ ನೀಡಲಾಗುವುದು. ಈಗಾಗಲೇ ವಿದ್ಯುತ್ ಗುತ್ತಿಗೆದಾರರು ವಿದ್ಯುತ್ ಉಪಕರಣಗಳನ್ನು ಖರೀದಿಸಲು ಕ್ರಮ ಕೈಗೊಂಡಿರುವುದಾಗಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments