Webdunia - Bharat's app for daily news and videos

Install App

ಕೃಷ್ಣಾ ನದಿ ಪ್ರವಾಹ: ಒಂದು ಕಿ.ಮೀ ಈಜಿ ಜೀವ ಉಳಿಸಿಕೊಂಡರು

Webdunia
ಗುರುವಾರ, 19 ಜುಲೈ 2018 (19:42 IST)
ಕೃಷ್ಣಾ ನದಿ ತೀರದಲ್ಲಿ ಈಗ ಪ್ರವಾಹ ಪರಿಸ್ಥಿತಿ ತಲೆದೋರಿದೆ. ನದಿ ತೀರದ ಕೆಲವು ಹಳ್ಳಿಗಳಿಗೆ ಸಂಚಾರ ಕಟ್ ಆಗಿದೆ. ಬಹುತೇಕ ಗ್ರಾಮಗಳ ಜನರು ನದಿ ನೀರಿನಲ್ಲಿಯೇ ಈಜಿ ದಡ ಸೇರಿ ಜೀವ ಉಳಿಕೊಳ್ಳುತ್ತಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ಸಮೀಪದ ನೀಲಕಂಟರಾಯನಗಡ್ಡಿ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಈಜುಕಾಯಿ ಮೂಲಕ ನದಿ ದಡವನ್ನು ಗ್ರಾಮಸ್ಥರು ಸೇರುತ್ತಿದ್ದಾರೆ. ಸುರಪುರ ತಾಲೂಕಿನ ಕಕ್ಕೇರಾ ಸಮೀಪದ ನೀಲಕಂಟರಾಯನಗಡ್ಡಿ ಗ್ರಾಮದಲ್ಲಿ ಈಗ ಪ್ರವಾಹ ಭೀತಿ ಎದುರಾಗಿದೆ. ಗ್ರಾಮಸ್ಥರು ನದಿ ದಾಟಿ ಸಂತೆಗೆ ತೆರಳಿದ ವೇಳೆ ಏಕಾಏಕಿ ನದಿಗೆ ನೀರು ಹೆಚ್ಚು ಹರಿದು ಬಂದು ಪ್ರವಾಹ ಉಂಟಾಗಿದೆ. ಗ್ರಾಮದ ಸುತ್ತಲೂ ನದಿ ನೀರು ಹರಿಯುತ್ತಿದ್ದು, ನದಿ ದಾಟಿ ಹೋಗಲು ಸಾಧ್ಯವಾಗುತ್ತಿಲ್ಲ. ಆದರೂ ನೀರನ್ನು ಲೆಕ್ಕಿಸದೆ ಗ್ರಾಮಸ್ಥರು ಈಜು ಕುಂಬಳಕಾಯಿ ಬಳಸಿ ಉಕ್ಕಿ ಹರಿಯುತ್ತಿರುವ ನದಿಯಲ್ಲೇ ನಾಲ್ಕೈದು ಜನ್ರು ಈಜಿ ದಡ ಸೇರಿದ್ದಾರೆ.

ಪ್ರತಿ ಬಾರಿಯೂ ಪ್ರವಾಹ ಬಂದಾಗಲೂ ನೀಲಕಂಟರಾಯನಗಡ್ಡಿ ದ್ವೀಪದಂತೆ ಆಗುತ್ತದೆ. ತಿಂಗಳು ವರೆಗೆ  ಹೊರ ಜಗತ್ತಿನ ಸಂಪರ್ಕ ಕಡಿತಗೊಳ್ಳುತ್ತದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ 1,53,000 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹಿನ್ನಲೆಯಲ್ಲಿ ಜಲಾಶಯದಿಂದ 1,43,000 ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬೀಡಲಾಗಿದ್ದು, ನದಿಯಲ್ಲಿ ಪ್ರವಾಹ ಉಂಟಾಗಿದೆ. ಜಿಲ್ಲೆಯ ಸುರಪುರ, ಶಹಾಪುರ ಹಾಗೂ ವಡಗೇರಾ ತಾಲೂಕಿನ ವಿವಿಧ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗುವ ಸಾಧ್ಯತೆಯಿದೆ. ಈಗಾಗಲೇ ನೀಲಕಂಟರಾಯನಗಡ್ಡಿ ಗ್ರಾಮಸ್ಥರು ಹೊರಗಿನ ಸಂಪರ್ಕ ಕಡಿದುಕೊಂಡಿದ್ದಾರೆ. ಸುಮಾರು ಒಂದು ಕಿ.ಮೀ. ದೂರದವರೆಗೆ ನದಿಯಲ್ಲಿ ಈಜುತ್ತಾ ಗ್ರಾಮಸ್ಥರು ದಡ ಸೇರಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ಗಿತ್ತು ಇನ್ನಷ್ಟು ದಂಧೆಗಳು

ಏರ್‌ ಇಂಡಿಯಾ ದುರಂತ: ಮೃತದೇಹ ಅದಲು, ಬದಲು, ಬ್ರಿಟನ್ ಕುಟುಂಬದ ಆರೋಪ

ಕರ್ನಾಟಕದಲ್ಲಿ ಜಾತಿಗಣತಿಗೆ ಡೇಟ್ ಫಿಕ್ಸ್

ಆಪರೇಷನ್ ಸಿಂಧೂರದಲ್ಲಿ ಗಾಯಗೊಂಡಿದ್ದ ಮುಂಬೈ ದಾಳಿಯ ಮಾಸ್ಟರ ಮೈಂಡ್ ಉಗ್ರ ಅಜೀಜ್ ಸಾವು

ಧರ್ಮಸ್ಥಳ ಕೇಸ್ ತನಿಖೆಗೆ ಮಾಸ್ಟರ್ ಪ್ಲ್ಯಾನ್ ಮಾಡಿದ ಎಸ್ಐಟಿ

ಮುಂದಿನ ಸುದ್ದಿ
Show comments