ಭೀಮಾ ನದಿ ತಡದಲ್ಲಿ ಪ್ರವಾಹ ಭೀತಿ

Webdunia
ಶುಕ್ರವಾರ, 21 ಅಕ್ಟೋಬರ್ 2022 (20:59 IST)
ಮಹಾರಾಷ್ಟ್ರದ ಘಟ್ಟ ಪ್ರದೇಶದ ಮತ್ತು ಕರ್ನಾಟಕದ ವಿವಿಧೆಡೆ ಮಳೆ ಮುಂದುವರಿದಿದ್ದು, ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಹಲವು ಕೆರೆಗಳು ಮತ್ತೆ ಕೋಡಿ ಹರಿಯುತ್ತಿದ್ದು, ರಸ್ತೆಗಳ ಮೇಲೆ ನೀರು ಬಂದಿರುವುದರಿಂದ ಸಂಚಾರ ಸ್ಥಗಿತಗೊಂಡಿದೆ. ಸತತ ಮಳೆಯಿಂದ ಜನಜೀವನ ಹೈರಾಣಾಗಿದೆ. ಮಹಾರಾಷ್ಟ್ರದ ವೀರ, ಉಜನಿ ಜಲಾಶಯಗಳಿಂದ ಭೀಮಾನದಿಗೆ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನದಿ ನೀರಿನಲ್ಲಿ ಗಾಣಗಾಪುರ ಹಾಗೂ ಘತ್ತರಗಿ ಸೇತುವೆಗಳು ಜಲಾವೃತಗೊಂಡಿವೆ. ಅಫಜಲಪುರ ಹಾಗೂ ವಿಜಯಪುರ ಮಾರ್ಗದ ಸಂಪರ್ಕ ಕಡಿತಗೊಂಡಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ನದಿ ಪ್ರವಾಹದಿಂದ ಅಫಜಲಪುರ ತಾಲೂಕು ಮಣ್ಣೂರಿನ ಯಲ್ಲಮ್ಮ ದೇಗುಲ ಜಲಾವೃತಗೊಂಡಿದೆ. ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯೂ ಮುಳುಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಗಳು

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಮುಂದಿನ ಸುದ್ದಿ
Show comments