Webdunia - Bharat's app for daily news and videos

Install App

ಭೀಮಾ ನದಿ ತಡದಲ್ಲಿ ಪ್ರವಾಹ ಭೀತಿ

Webdunia
ಶುಕ್ರವಾರ, 21 ಅಕ್ಟೋಬರ್ 2022 (20:59 IST)
ಮಹಾರಾಷ್ಟ್ರದ ಘಟ್ಟ ಪ್ರದೇಶದ ಮತ್ತು ಕರ್ನಾಟಕದ ವಿವಿಧೆಡೆ ಮಳೆ ಮುಂದುವರಿದಿದ್ದು, ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಹಲವು ಕೆರೆಗಳು ಮತ್ತೆ ಕೋಡಿ ಹರಿಯುತ್ತಿದ್ದು, ರಸ್ತೆಗಳ ಮೇಲೆ ನೀರು ಬಂದಿರುವುದರಿಂದ ಸಂಚಾರ ಸ್ಥಗಿತಗೊಂಡಿದೆ. ಸತತ ಮಳೆಯಿಂದ ಜನಜೀವನ ಹೈರಾಣಾಗಿದೆ. ಮಹಾರಾಷ್ಟ್ರದ ವೀರ, ಉಜನಿ ಜಲಾಶಯಗಳಿಂದ ಭೀಮಾನದಿಗೆ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನದಿ ನೀರಿನಲ್ಲಿ ಗಾಣಗಾಪುರ ಹಾಗೂ ಘತ್ತರಗಿ ಸೇತುವೆಗಳು ಜಲಾವೃತಗೊಂಡಿವೆ. ಅಫಜಲಪುರ ಹಾಗೂ ವಿಜಯಪುರ ಮಾರ್ಗದ ಸಂಪರ್ಕ ಕಡಿತಗೊಂಡಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ನದಿ ಪ್ರವಾಹದಿಂದ ಅಫಜಲಪುರ ತಾಲೂಕು ಮಣ್ಣೂರಿನ ಯಲ್ಲಮ್ಮ ದೇಗುಲ ಜಲಾವೃತಗೊಂಡಿದೆ. ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯೂ ಮುಳುಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments