Webdunia - Bharat's app for daily news and videos

Install App

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

Sampriya
ಭಾನುವಾರ, 27 ಜುಲೈ 2025 (13:29 IST)
Photo Credit X
ಬೆಂಗಳೂರು:  ಮುಂಗಾರು ಅಬ್ಬರದಿಂದಾಗಿ ಕೆಆರ್‌ಎಸ್ ಅಣೆಕಟ್ಟೆಯ ಒಳಹರಿವು ಹಾಗೂ ಹೊರಹರಿವಿನಲ್ಲಿ ಏರಿಕೆಯಾಗಿದೆ. ಅದರ ಬೆನ್ನಲ್ಲೇ ಮಂಡ್ಯ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ. 

ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವ ಪರಿಣಾಮ ಕಾವೇರಿ ನದಿಯಲ್ಲಿ ಪಿಂಡ ಪ್ರದಾನಕ್ಕೆ ಮಂಡ್ಯ ಜಿಲ್ಲಾಡಳಿತ ನಿಷೇಧ ಹೇರಿದೆ. ಅದರ ಜೊತೆಗೆ ಕಾವೇರಿ ನದಿ ಪಾತ್ರದಲ್ಲಿ ಇರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿರ್ಬಂಧ ಹೇರಿದೆ. 

ಹಳೆ ಮೈಸೂರು ಭಾಗದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಯ ಒಳಹರಿವು ಹಾಗೂ ಹೊರಹರಿವಿನಲ್ಲಿ ಏರಿಕೆಯಾಗಿದೆ. ಕೆಆರ್‌ಎಸ್ ಡ್ಯಾಂಗೆ 52,856 ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆ ಡ್ಯಾನಿಂದ 56,474 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.  

124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಂ 123.80 ಅಡಿಯಷ್ಟು ಭರ್ತಿಯಾಗಿದೆ. ಡ್ಯಾಂ 49.452 ಟಿಎಂಸಿ ಗರಿಷ್ಠ ಸಾಮಾರ್ಥ್ಯ ಹೊಂದಿದೆ. ಇಂದು 48.062 ಟಿಎಂಸಿಯಷ್ಟು ನೀರು ಶೇಖರಣೆ ಆಗಿದೆ. ಈಗಾಗಲೇ ಮಂಡ್ಯ ಜಿಲ್ಲಾಡಳಿತ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳದಲ್ಲಿ ಇರುವುದರ ಜೊತೆಗೆ ಆಸ್ತಿ- ಪಾಸ್ತಿ, ಜಾನುವಾರುಗಳ ರಕ್ಷಣೆ ಸಂಬಂಧ ಅಲರ್ಟ್ ಘೋಷಣೆ ಮಾಡಿದೆ.  

ಕೆಆರ್‌ಎಸ್ ಅಣೆಕಟ್ಟೆ ಜೂನ್ ತಿಂಗಳಲ್ಲಿಯೇ ಭರ್ತಿಯಾಗಿರುವುದರಿಂದ ಇನ್ನುಮುಂದೆ ಬಂದ ಒಳಹರಿವನ್ನು, ಹೊರಹರಿವನ್ನಾಗಿ ಮಾಡಬೇಕಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾವೇರಿ ಕೊಳ್ಳದಲ್ಲಿ ಪ್ರವಾಹ ಎದುರಾಗುವ ಸಾಧ್ಯತೆ ಸಹ ಇದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ಮುಂದಿನ ಸುದ್ದಿ
Show comments