Webdunia - Bharat's app for daily news and videos

Install App

ಕಾವೇರಿ ಕೊಳ್ಳದಲ್ಲಿ ಪ್ರವಾಹದ ಭೀತಿ

Webdunia
ಶನಿವಾರ, 18 ಆಗಸ್ಟ್ 2018 (18:25 IST)
ಮಡಿಕೇರಿಯಲ್ಲಿ ಬಿಟ್ಟು ಬಿಡದೇ ಮಳೆ ಆಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ ಅಣೆಕಟ್ಟೆಯಲ್ಲಿ ಒಳ‌ ಹರಿವು ಕಡಿಮೆ ಆಗದ ಕಾರಣ ನದಿಗೆ ನಿರಂತರವಾಗಿ ನೀರು ಬಿಡಲಾಗುತ್ತಿದೆ. ಇದೀಗ ಕಾವೇರಿ ಕೊಳ್ಳದಲ್ಲಿ ಪ್ರವಾಹದ ಭೀತಿ ಮತ್ತಷ್ಟು ಹೆಚ್ಚಾಗಿದೆ.

ಒಂದೆಡೆ ಮಡಿಕೇರಿಯಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ ಅಣೆಕಟ್ಟೆಯಿಂದ 1.30 ಲಕ್ಷ ಕ್ಯೂಸೆಕ್ ನೀರನ್ನು ಹರಿ ಬಿಡಲಾಗುತ್ತಿದೆ. ನಿನ್ನೆ 1.15 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿತ್ತು.‌ ಆದರೆ ಮಡಿಕೇರಿಯಿಂದ ಬರುತ್ತಿರುವ ನೀರು ಕಡಿಮೆ ಆಗದ ಕಾರಣ ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ನಿಟ್ಟಿನಲ್ಲಿ ಶ್ರೀರಂಗಪಟ್ಟಣ ದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಮುಳುಗಡೆ ಹಂತದಲ್ಲಿದ್ದು, ತಾತ್ಕಾಲಿಕ ತಡೆ ಗೋಡೆ ಹಾಕಿದ್ದಾರೆ. 

ಮತ್ತೊಂದೆಡೆ ನಿಮಿಷಾಂಭ ದೇವಾಲಯ ದ ಗರ್ಭಗುಡಿ ಮುಂದೆಯೂ ನೀರು ತುಂಬಿಕೊಂಡಿದ್ದು, ಭಕ್ತರಿಗೆ ನೀರಿಗಿಳಿಯದಂತೆ ಸೂಚಿಸಲಾಗಿದೆ. ಶ್ರೀರಂಗಪಟ್ಟಣ ದ ರಂಗನತಿಟ್ಟಿನಲ್ಲೂ ಬೋಟಿಂಗ್ ಸ್ಥಗಿತಗೊಳಿಸಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಮಳವಳ್ಳಿ ಯ ಮುತ್ತತ್ತಿಯಲ್ಲೂ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಇನ್ನು ಕೆ.ಆರ್.ಎಸ್. ನಲ್ಲಿ ನದಿಗೆ ನೀರು ಹೋಗುತ್ತಿರುವ ದೃಶ್ಯಗಳನ್ನು ನೋಡಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.





ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments