Select Your Language

Notifications

webdunia
webdunia
webdunia
webdunia

ಪ್ರವಾಹಕ್ಕೆ ಜನ ತತ್ತರ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಕೋಟಿ ರೂಪಾಯಿ ಪರಿಹಾರ

ಪ್ರವಾಹಕ್ಕೆ ಜನ ತತ್ತರ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಕೋಟಿ ರೂಪಾಯಿ ಪರಿಹಾರ
ಬೆಂಗಳೂರು , ಗುರುವಾರ, 15 ಆಗಸ್ಟ್ 2019 (17:44 IST)
ರಾಜ್ಯದ ಪ್ರವಾಹ ಪರಿಸ್ಥಿತಿಗೆ ಜನಸಾಮಾನ್ಯರು, ನಟರು ಸ್ಪಂದಿಸುತ್ತಿರುವಂತೆ ಇದೀಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ನೆರವಿಗೆ ಮುಂದಾಗಿದೆ.

ಮಂಗಳೂರು ಭಾಗದಲ್ಲಾದ ಪ್ರವಾಹದ ಹಿನ್ನೆಲೆಯಲ್ಲಿ ಸಂತ್ರಸ್ತರ ನೆರವಿಗಾಗಿ ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು 1 ಕೋಟಿ ರೂಪಾಯಿ ಪರಿಹಾರ ನೀಡಲು ನಿರ್ಧರಿಸಿದೆ.

ದೇವಸ್ಥಾನದ ನಿಧಿಯಿಂದ 1 ಕೋಟಿ ರೂಪಾಯಿ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರ ಅಧ್ಯಕ್ಷತೆಯಲ್ಲಿ ಸೇರಿದ ಆಡಳಿತ ಮಂಡಳಿಯ ಸಭೆಯಲ್ಲಿ  ನಿರ್ಧಾರ ಕೈಗೊಳ್ಳಲಾಗಿದೆ. 

ದೇವಸ್ಥಾನಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಬರುತ್ತಿದ್ದ ಬಯಲು ಸೀಮೆಯ ಭಕ್ತರಿಗೆ ಪ್ರವಾಹದಿಂದ ಸಾಕಷ್ಟು ಸಂಕಷ್ಟವಾಗಿದೆ.  1 ಕೋಟಿ ಹಣವನ್ನು ಪರಿಹಾರ ನಿಧಿಗೆ ನೀಡಲು ನಿರ್ಧರಿಸಲಾಗಿದೆ ಎಂಬುದಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ದೀಪಿಕಾ – ಪ್ರಿಯಾಂಕ ನಡುವೆ ನಂಬರ್ 1 ಸ್ಥಾನಕ್ಕೆ ವಾರ್