Webdunia - Bharat's app for daily news and videos

Install App

ಸರಕಾರದ ಕಾರ್ಯಕ್ರಮಗಳ ನಿಷೇಧ ವಿರುದ್ಧ ಮಾರಾಟಗಾರರ ಪ್ರತಿಭಟನೆ

Webdunia
ಬುಧವಾರ, 11 ಆಗಸ್ಟ್ 2021 (21:48 IST)
ಸರಕಾರದ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ ಹಣ್ಣಿನ ಬುಟ್ಟಿ ನಿಷೇಧ ಹಿಂತೆಗುಕೊಳ್ಳುವಂತೆ ಆಗ್ರಹಿಸಿ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪಬೆಳೆಗಾರರು, ಪುಷ್ಪ ಕೃಷಿ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘದ ಪ್ರತಿಭಟನೆ
 
ರಾಜ್ಯ ಸರಕಾರ ಮತ್ತು ಸರಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನೀಡದೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶ ರಾಜ್ಯದ ಪುಷ್ಪ ಬೆಳೆಗಾರರು ಹಾಗೂ ರೈತರ ಮೇಲೆ ಗಧಾಪ್ರಹಾರ ವಾಗಿದೆ. ಈ ಆದೇಶವನ್ನು ತಕ್ಷಣ ಹಿಂದಕ್ಕೆ ತಗೆದುಕೊಳ್ಳಬೇಕೆಂದು ಸರಕಾರವನ್ನು ಒತ್ತಾಯಿಸಲು ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷರಾದ ಟಿ.ಎಂ ಅರವಿಂದ್‌ ಹಾಗೂ ಸಂಘದ ನಿರ್ದೇಶಕರಾದ ಶ್ರೀಕಾಂತ್‌ ಬೊಲ್ಲಪಳ್ಳಿ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು, ಪುಷ್ಪ ಕೃಷಿ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘದ ನೇತೃತ್ವದಲ್ಲಿ ರಾಜ್ಯದ ಪುಷ್ಪ ಬೆಳೆಗಾರರು, ರೈತರು ಮತ್ತು ಮಾರಾಟಗಾರರ  ಬೃಹತ್‌ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆಯನ್ನು ನಡೆಸಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments