Publish Date: Thu, 11 Jun 2020 (16:44 IST)
Updated Date: Thu, 11 Jun 2020 (16:46 IST)
ಕೊರೊನಾ ವಾರಿಯರ್ಸ್ ಗೆ ವಿಭಿನ್ನವಾಗಿ ಗೌರವ ಸಮರ್ಪಣೆ ಮಾಡಲಾಗುತ್ತಿದೆ.
ಬೆಂಗಳೂರಿನ ವಿಧಾನಸೌಧ ಎದುರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತೋಟಗಾರಿಕೆ ಸಚಿವ ಡಾ. ನಾರಾಯಣಗೌಡ ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸಿದರು.
ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಪ್ಲವರ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿದ ಕಾರ್ಯಕ್ರಮದಲ್ಲಿ 1 ಲಕ್ಷದ 72 ಸಾವಿರ ಹೂಗಳನ್ನ ಬಳಸಿ ಅಲಂಕಾರ ಮಾಡಲಾಗಿದೆ.
ಬೆಂಗಳೂರಿನ ವಿವಿಧೆಡೆ ಮೂರು ದಿನಗಳ ಕಾಲ ಪುಷ್ಪಾಲಂಕರದ ಕೊರೊನಾ ವಾರಿಯರ್ಸ್ ಗೆ ಫ್ಲವರ್ ಮೂಲಕ ಗೌರವ ಸಮರ್ಪಣೆ ಮಾಡಲಾಗುತ್ತಿದೆ.