Select Your Language

Notifications

webdunia
webdunia
webdunia
webdunia

ಧ್ವನಿವರ್ಧಕ ಆದೇಶ ಪಾಲಿಸಿ, ಖಡಕ್ ಎಚ್ಚರಿಕೆ ನೀಡಿದ ಕಮಲ್ ಪಂಥ್

ಧ್ವನಿವರ್ಧಕ ಆದೇಶ ಪಾಲಿಸಿ, ಖಡಕ್ ಎಚ್ಚರಿಕೆ ನೀಡಿದ ಕಮಲ್ ಪಂಥ್
ಬೆಂಗಳೂರು , ಮಂಗಳವಾರ, 5 ಏಪ್ರಿಲ್ 2022 (17:01 IST)
ಪ್ರಾರ್ಥನಾ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಹೈಕೋರ್ಟ್ ನೀಡಿರುವ ಆದೇಶವನ್ನು ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಇಂದಿಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿ, ಪ್ರಾರ್ಥನಾ ಮಂದಿರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಕಳೆದ ಆರು ತಿಂಗಳ ಹಿಂದೆಯೇ ಹೈಕೋರ್ಟ್ ಆದೇಶ ನೀಡಿದೆ. ಮಸೀದಿ, ಮಂದಿರ ಮಾತ್ರವಲ್ಲ, ಕಾರ್ಖಾನೆ, ಪಬ್‍ಗಳಿಗೂ ಕೂಡ ನೋಟಿಸ್ ನೀಡಲಾಗಿದೆ. ಧರ್ಮ ಮುಖಂಡರ ಜತೆ ಸಭೆ ನಡೆಸಿ ಅವರಿಗೂ ಮಾರ್ಗದರ್ಶನ ನೀಡಲಾಗಿದೆ. ಅದರಂತೆ ಧರ್ಮಗುರುಗಳು ನಡೆದುಕೊಂಡಿದ್ದಾರೆ ಎಂದರು.
 
ಮಾಲಿನ್ಯ ನಿಯಂತ್ರಣ ಮಂಡಳಿಯೂ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ. ನಗರದಲ್ಲಿ ಈಗಾಗಲೇ ಹಲವು ಕಡೆ ಮೈಕ್‍ಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ, 40ಕ್ಕೂ ಅಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಾನೂನು ಉಲ್ಲಂಘಿಸಿದರೆ ಮುಂದೆಯೂ ಸಹ ಮೈಕ್‍ಗಳನ್ನು ಜಪ್ತಿ ಮಾಡುತ್ತೇವೆ. ಯಾರಾದರೂ ಕಾನೂನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುವುದಾಗಿ ಕಮಲ್‍ಪಂತ್ ಅವರು ಎಚ್ಚರಿಸಿದರು. ಎಲ್ಲರೂ ಶಾಂತಿ-ಸುವ್ಯವಸ್ಥೆ ಕಾಪಾಡಿಕೊಂಡು ಜೀವನ ನಡೆಸಬೇಕು ಎಂದು ಅವರು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನಗರದಲ್ಲಿ 60% ಶಾಲೆಗಳಿಗೆ ಅನುಮತಿ ಇಲ್ಲ..!!! ಆರ್. ಅಶೋಕ್