ಕಾರ್ಮಿಕರಿಗೆ ಆಹಾರ ಕಿಟ್ ನೀಡದೇ ಅಧಿಕಾರಿಗಳ ನಿರ್ಲಕ್ಷ್ಯ

Webdunia
ಬುಧವಾರ, 14 ಜುಲೈ 2021 (14:32 IST)
ಡಿಸಿಎಂ  ಕಾರಜೋಳ ಅವರ ಕ್ಷೇತ್ರವಾಗಿರುವ ಮುಧೋಳ ಪಟ್ಟಣದಲ್ಲಿ
ಸರ್ಕಾರ ದಿಂದ ಕಟ್ಟಡ ಕಾರ್ಮಿಕರಿಗೆ  ವಿತರಣೆ ಮಾಡುವ ಆಹಾರ  ಕಿಟ್ ವನ್ನು ಸರಿಯಾಗಿ ವಿತರಣೆ ಮಾಡುತ್ತಿಲ್ಲ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬಾಗಲಕೋಟ ಜಿಲ್ಲೆಯ ಮುದೋಳ ಪಟ್ಟಣದಲ್ಲಿ ಜರುಗಿದೆ.ಕಳೆದ ನಾಲ್ಕು ದಿನಗಳಿಂದ ಕಿಟ್ ಪಡೆಯಲು ಕಟ್ಟಡ ಕಾರ್ಮಿಕರು ಗೋಡಾನ್ ಎದುರು ಸರದಿಯಾಗಿ ನಿಂತಿದ್ದಾರೆ.ಆದರೆ ಒಳಗಡೆ ಕಿಟ್ ಇದ್ದರೂ,ಅಧಿಕಾರಿಗಳು ಕಾರ್ಮಿಕರಿಗೆ ನೀಡುತ್ತಿಲ್ಲ.ಇದರಿಂದ ಬೇಸತ್ತು ಜನರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು, ಪ್ರತಿ ನಿತ್ಯ ದುಡಿದರೆ ಮಾತ್ರ ಒಪ್ಪತ್ತಿನ ಊಟ ಸಿಗುತ್ತದೆ.ಆದರೆ ಕಳೆದ ನಾಲ್ಕು ದಿನಗಳಿಂದ ಕಿಟ್ ವಿತರಣೆ ಮಾಡದೆ ಸತಾಯಿಸುತ್ತಿದ್ದಾರೆ.ಈ ಸಂಭಂದ ಕಾರ್ಮಿಕರು ಗಲಾಟೆ ಮಾಡುತ್ತಿರುವಾಗ ಸ್ಥಳೀಯ ರೈತ ಮುಖಂಡರು ಹೋಗಿ ಸಮಾಧಾನ ಪಡಿಸಿದ್ದಾರೆ.ನಂತರ ಅಧಿಕಾರಿಗಳಿಗೆ ಕರೆದು ಕಿಟ್ ವಿತರಣೆ ಮಾಡಿಸಿದ್ದಾರೆ.ಕಾರ್ಮಿಕರ ಇಲಾಖೆ ವತಿಯುಂದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕಳೆದ ಎಂಟು ದಿನಗಳ ಹಿಂದೆ ಸಾಂಕೇತಿಕ ವಾಗಿ ವಿತರಣೆ ಮಾಡಿ ಎಲ್ಲರಿಗೂ ಮುಟ್ಟಿಸುವಂತೆ ಸೂಚನೆ ನೀಡಿದ್ದರು. ಆದರೆ ಇದುವರೆಗೂ ಕಿಟ್ ವಿತರಣೆ ಮಾಡದೆ ಹಿನ್ನಲೆ ಆಕ್ರೋಶ ವ್ಯಕ್ತವಾಗಿತ್ತು.ಮುಧೋಳ ತಾಲೂಕಿನ ಎಲ್ಲಾ ಕಟ್ಟಡ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆಮುಟ್ಟಿಸಬೇಕಾಗಿದೆ.
ಇಲ್ಲವಾದಲ್ಲಿ ಒಳಗಡೆ ಇದ್ದ ಆಹಾರ ಸಾಮಗ್ರಿಗಳುಹಾಳಾಗುತ್ತದೆ.ಆದ್ರೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡದೆ,ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡಬೇಕು ಎಂದು ಸ್ಥಳೀಯ ರೈತ ಯುವ ಮುಖಂಡ ಯಲ್ಲಪ್ಪ ಹೆಗಡೆ ತಿಳಿಸಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments