Select Your Language

Notifications

webdunia
webdunia
webdunia
webdunia

ವಿಷಾಹಾರ ಪ್ರಕರಣ: ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಭೇಟಿ

ವಿಷಾಹಾರ ಪ್ರಕರಣ: ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಭೇಟಿ
ಬೆಂಗಳೂರು , ಭಾನುವಾರ, 16 ಡಿಸೆಂಬರ್ 2018 (18:24 IST)
ವಿಷಾಹಾರ ಸೇವಿಸಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿಕೆ ನೀಡಿದ್ದು, ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲರೂ ಚೆನ್ನಾಗಿದ್ದಾರೆ. ಖಾಸಗಿ ಆಸ್ಪತ್ರೆ ಅಪೋಲೋ ದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ವೈದ್ಯರು ಕೂಡ ಪ್ರಾಣ ಉಳಿಸಲು ಶತ ಪ್ರಯತ್ನ ನಡೆಸುತ್ತಿದ್ದಾರೆ ಎಂದಿದ್ದಾರೆ.

ಘಟನೆ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದ ಅವರು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲೇಬೇಕು ಎಂದರು.

ಇನ್ನು ಕೆ.ಆರ್.ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಕೊರತೆ ವಿಚಾರವಾಗಿ ಮಾತನಾಡಿ, ಈ ಆಸ್ಪತ್ರೆ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬರುತ್ತದೆ. ಈಗಾಗಲೇ ಶಿವಕುಮಾರ್ ಜೊತೆ ಮಾತುಕತೆ ನಡೆಸಿದ್ದೇನೆ. ಅವರು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ಮೂಲಭೂತ ಸಮಸ್ಯೆ ಬಗ್ಗೆ ಚರ್ಚಿಸಿ, ಶೀರ್ಘದಲ್ಲೆ ಸಮಸ್ಯೆ ಪರಿಹರಿಸಲಾಗುವುದು ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ವಿವಾದಿತ ಜಮೀನಿಗಾಗಿ ನಡುರಸ್ತೆಯಲ್ಲೇ ಬಡಿದಾಡಿಕೊಂಡರು..!